ನವದೆಹಲಿ: ಇತಿಹಾಸಕಾರರು ಭಾರತದ ಇತಿಹಾಸವನ್ನು ಮರು ಬರೆಯಬೇಕು, ಈಗಾಗಲೇ ಇರುವ ತಿರುಚಿತ ಇತಿಹಾಸವನ್ನು ಸರಿಪಡಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ನೀಡಿದ್ದು, ಈ ಪ್ರಯತ್ನಗಳಿಗೆ ಸರಕಾರ ಬೆಂಬಲ ನೀಡಲಿದೆ ಎಂದು ಭರವಸೆ ನೀಡಿದ್ದಾರೆ.
“ನಾನು ಇತಿಹಾಸದ ವಿದ್ಯಾರ್ಥಿಯಾಗಿದ್ದೇನೆ. ನಮ್ಮ ಇತಿಹಾಸವನ್ನು ಸರಿಯಾಗಿ ಪ್ರಸ್ತುತಪಡಿಸಲಾಗಿಲ್ಲ ಮತ್ತು ತಿರುಚಲಾಗಿದೆ ಎಂದು ನಾನು ಬಹಳಷ್ಟು ಬಾರಿ ಅರಿತುಕೊಂಡಿದ್ದೇನೆ. ಈಗ ನಾವು ತಿರುಚಿದ ಇತಿಹಾಸವನ್ನು ಸರಿಪಡಿಸಬೇಕಾಗಿದೆ” ಎಂದು ಶಾ ಹೇಳಿದ್ದಾರೆ.
17ನೇ ಶತಮಾನದ ಅಹೋಮ್ ಜನರಲ್ ಲಚಿತ್ ಬರ್ಫುಕನ್ ಅವರ 400ನೇ ಜನ್ಮದಿನಾಚರಣೆಯ ಪ್ರಯುಕ್ತ ದೆಹಲಿಯಲ್ಲಿ ಆಯೋಜಿಸಲಾದ ಮೂರು ದಿನಗಳ ಆಚರಣೆಯ 2ನೇ ದಿನದಂದು ನಿನ್ನೆ ಮಾತನಾಡಿದ ಅವರು, “ಇತಿಹಾಸವನ್ನು ಸರಿಯಾಗಿ ಮತ್ತು ವೈಭವಯುತವಾಗಿ ಪ್ರಸ್ತುತಪಡಿಸುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ” ಎಂದಿದ್ದಾರೆ.
ಲಚಿತ್ ಬರ್ಫುಕನ್ ಅವರ ನೆನಪಿಗಾಗಿ ನವೆಂಬರ್ 24 ಅನ್ನು ಲಚಿತ್ ದಿವಸ್ ಎಂದು ಆಚರಿಸಲಾಗುತ್ತದೆ.
“ಇಲ್ಲಿ ಕುಳಿತಿರುವ ಎಲ್ಲಾ ವಿದ್ಯಾರ್ಥಿಗಳು ಮತ್ತು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರು ಇತಿಹಾಸ ಸರಿಯಿಲ್ಲ ಎಂಬ ನಿರೂಪಣೆಯನ್ನು ತೊಡೆದು ಸರಿಯಾದ ಇತಿಹಾಸವನ್ನು ಬರೆಯಿರಿ ಮತ್ತು ದೇಶದಲ್ಲಿ 150 ವರ್ಷಗಳ ಕಾಲ ಆಳಿದ 30 ರಾಜವಂಶಗಳು ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ 300 ಗಣ್ಯ ವ್ಯಕ್ತಿಗಳ ಬಗ್ಗೆ ಸಂಶೋಧನೆ ಮಾಡಲು ಪ್ರಯತ್ನಿಸಿ” ಎಂದು ಅವರು ಹೇಳಿದರು.
ವಿಜ್ಞಾನ ಭವನದಲ್ಲಿ ಹಾಜರಿದ್ದ ಇತಿಹಾಸಕಾರರು ಮತ್ತು ವಿದ್ಯಾರ್ಥಿಗಳಿಗೆ ಭರವಸೆ ನೀಡಿದ ಶಾ, ಸಂಶೋಧನೆಗೆ ಕೇಂದ್ರವು ಬೆಂಬಲ ನೀಡಲಿದೆ ಎಂದರು.
“ಮುಂದೆ ಬನ್ನಿ, ಸಂಶೋಧನೆ ಮಾಡಿ ಮತ್ತು ಇತಿಹಾಸವನ್ನು ಪುನಃ ಬರೆಯಿರಿ. ಈ ರೀತಿಯಾಗಿ ನಾವು ಭವಿಷ್ಯದ ಪೀಳಿಗೆಗೂ ಸ್ಫೂರ್ತಿ ನೀಡಬಹುದು” ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.