ಬೆಂಗಳೂರು: ದಿವಂಗತ ಮಾಜಿ ಪ್ರಧಾನಿ ವಾಜಪೇಯಿಯವರ ಸ್ಮರಣಾರ್ಥವಾಗಿ ಡಿ.1ರಿಂದ ‘ಸುಶಾಸನ ಮಾಸ’ವನ್ನು ಆಚರಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ಕೇಂದ್ರದ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರವು ವಾಜಪೇಯಿ ಜನ್ಮದಿನ ಡಿಸೆಂಬರ್ 25 ಅನ್ನು ಸುಶಾಸನ ದಿನವನ್ನಾಗಿ ಘೋಷಣೆ ಮಾಡಿದೆ.
ಸುಶಾಸನ ಮಾಸಾಚರಣೆ ಅಂಗವಾಗಿ ಉನ್ನತ ಶಿಕ್ಷಣ, ಐಟಿ-ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಯಲ್ಲಿ ಕೈಗೊಂಡ ಹಲವು ಸುಧಾರಣಾ ಕ್ರಮಗಳನ್ನು ಇಡೀ ತಿಂಗಳು ಜನರಿಗೆ ತಿಳಿಸುವ ಸಲುವಾಗಿ ನಿರಂತರ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ.
ಡಿ.25 ರಂದು ಸಮಾರೋಪ ಸಮಾರಂಭ ನಡೆಯಲಿದ್ದು ಅಂದು ಮುಖ್ಯಮಂತ್ರಿ ಭಾಗವಹಿಸಲಿದ್ದಾರೆ. ಅಂದು ಹಲವು ಮಹತ್ವದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಮಾಹಿತಿ ನೀಡಿದ್ದಾರೆ.
ಸುಶಾಸನ ಮಾಸಾಚರಣೆಯ ಅಂಗವಾಗಿ, ಉತ್ತಮ ವಿವಿಗಳು ಸೇರಿದಂತೆ ಹಲವು ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡುವ ನಿರ್ಧಾರ ಮಾಡಲಾಗಿದ್ದು, ಇದಕ್ಕೆ ಸಿದ್ಧತೆ ನಡೆಸಲು ಸೂಚಿಸಿದ್ದಾರೆ.
ಸುಶಾಸನ ಮಾಸಾಚರಣೆಯ ವೇಳೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸಂಪೂರ್ಣವಾಗಿ ಹೊಸ ರೂಪ ನೀಡಲಾಗುವುದು. ಜೊತೆಗೆ ಕೌಶಲಾಭಿವೃದ್ಧಿ ಇಲಾಖೆ ಮೂಲಕ 10 ಸಾವಿರ ಜನರಿಗೆ ವಿವಿಧ ಸಂಸ್ಥೆಗಳಲ್ಲಿ ಉದ್ಯೋಗ ಕೊಡಿಸುವ ನೇಮಕಾತಿ ಪತ್ರಗಳನ್ನು ನೀಡಲಾಗುವುದು. ಜೊತೆಗೆ, ಜಿಟಿಟಿಸಿ ಸಂಭ್ರಮದ ಅಂಗವಾಗಿ ಕಟ್ಟಿರುವ ನೂತನ ಕಟ್ಟಡವನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಗುವುದು. ಜೊತೆಗೆ, ತಾಂತ್ರಿಕ ಶಿಕ್ಷಣ ಇಲಾಖೆಗೆ ನೇಮಕಾತಿ ಮತ್ತು ವೃಂದದ ನಿಯಮಗಳು 15 ವರ್ಷಗಳ ನಂತರ ರೂಪಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.