ನವದೆಹಲಿ: ಇಂಡಿಯನ್ ಕೌನ್ಸಿಲ್ ಆಫ್ ಹಿಸ್ಟಾರಿಕಲ್ ರಿಸರ್ಚ್ (ಐಸಿಎಚ್ಆರ್) ಸಿದ್ಧಪಡಿಸಿ ಪ್ರಕಟಿಸಿರುವ ‘ಇಂಡಿಯಾ: ದಿ ಮದರ್ ಆಫ್ ಡೆಮಾಕ್ರಸಿ’ ಪುಸ್ತಕವನ್ನು ಕೇಂದ್ರ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಗುರುವಾರ ನವದೆಹಲಿಯಲ್ಲಿ ಬಿಡುಗಡೆ ಮಾಡಿದರು.
ಈ ಪುಸ್ತಕವು ನಾಗರಿಕತೆಯ ಉದಯದಿಂದಲೂ ಭಾರತದಲ್ಲಿ ಬೇರೂರಿರುವ ಪ್ರಜಾಪ್ರಭುತ್ವದ ನೀತಿಯನ್ನು ಪ್ರದರ್ಶಿಸುವ ಪ್ರಯತ್ನವಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಧರ್ಮೇಂದ್ರ ಪ್ರಧಾನ್, ಭಾರತದಲ್ಲಿ ಪ್ರಜಾಪ್ರಭುತ್ವದ ಬೇರುಗಳನ್ನು 4 ನೇ ಶತಮಾನದಷ್ಟು ಹಿಂದೆಯೇ ಗುರುತಿಸಲಾಗಿದೆ. ತಂಜಾವೂರಿನ ಶಿಲಾ ಶಾಸನಗಳು ಅದಕ್ಕೆ ಜೀವಂತ ಸಾಕ್ಷಿ. ಕಳಿಂಗ ಮತ್ತು ಲಿಚ್ಛವಿಗಳ ಕಾಲದಲ್ಲಿದ್ದ ಸಾಮಾಜಿಕ ವ್ಯವಸ್ಥೆಗಳ ಪುರಾವೆಗಳು ಭಾರತದ ಪ್ರಜಾಪ್ರಭುತ್ವದ ಡಿಎನ್ಎ ಬಗ್ಗೆಯೂ ಹೇಳುತ್ತವೆ. ವಿಶ್ವಸಂಸ್ಥೆಯ 76ನೇ ಮಹಾಧಿವೇಶನದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತವು ಅತ್ಯಂತ ಹಳೆಯ ಪ್ರಜಾಪ್ರಭುತ್ವ ಮಾತ್ರವಲ್ಲ, ಪ್ರಜಾಪ್ರಭುತ್ವದ ತಾಯಿಯೂ ಆಗಿದೆ ಎಂದು ಹೇಳಿದ್ದಾರೆ.
ನಾಗರಿಕತೆಯ ಸಾಮರ್ಥ್ಯದ ಬಗ್ಗೆ ಹೆಮ್ಮೆ ಪಡದ ಸಮಾಜವು ದೊಡ್ಡದನ್ನು ಯೋಚಿಸಲು ಮತ್ತು ಸಾಧಿಸಲು ಸಾಧ್ಯವಿಲ್ಲ ಎಂದು ಸಚಿವರು ಹೇಳಿದರು.
ಪುಸ್ತಕ ʼಇಂಡಿಯಾ: ದಿ ಮದರ್ ಆಫ್ ಡೆಮಾಕ್ರಸಿʼ ಭಾರತದ ಪ್ರಜಾಸತ್ತಾತ್ಮಕ ಪರಂಪರೆಯ ಕುರಿತು ಆರೋಗ್ಯಕರ ಚರ್ಚೆಗಳನ್ನು ಉತ್ತೇಜಿಸುತ್ತದೆ ಮತ್ತು ಭವಿಷ್ಯದ ಪೀಳಿಗೆಗೆ ನಮ್ಮ ಕಾಲಾತೀತ ನೀತಿಯನ್ನು ಪಾಲಿಸಲು ಪ್ರೇರೇಪಿಸುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.