ಗಾಂಧಿನಗರ: ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಪಕ್ಷವು ಅಧಿಕಾರವನ್ನು ಉಳಿಸಿಕೊಂಡರೆ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರುವುದಾಗಿ ಭರವಸೆ ನೀಡಿದೆ.
ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ, ಪಕ್ಷವು ಹೆಣ್ಣುಮಕ್ಕಳಿಗೆ ಕೆಜಿಯಿಂದ ಪಿಜಿವರೆಗೆ (ಶಿಶುವಿಹಾರದಿಂದ ಸ್ನಾತಕೋತ್ತರ ಪದವಿವರೆಗೆ) ಉಚಿತ ಶಿಕ್ಷಣದ ಭರವಸೆಯನ್ನೂ ನೀಡಿದೆ.
ಆಯುಷ್ಮಾನ್ ಭಾರತ್ ಯೋಜನೆಯಡಿ ವೈದ್ಯಕೀಯ ವಿಮಾ ರಕ್ಷಣೆಯ ಮೊತ್ತವನ್ನು ಐದು ಲಕ್ಷದಿಂದ 10 ಲಕ್ಷಕ್ಕೆ ದ್ವಿಗುಣಗೊಳಿಸಲಾಗುವುದು ಎಂದು ಅದು ಭರವಸೆ ನೀಡಿದೆ.
ರಾಜ್ಯವನ್ನು ವಿದೇಶಿ ನೇರ ಬಂಡವಾಳ ಹೂಡಿಕೆಯ ತಾಣವನ್ನಾಗಿ ಮಾಡುವ ಮೂಲಕ ಗುಜರಾತ್ನ ಆರ್ಥಿಕತೆಯನ್ನು 1 ಟ್ರಿಲಿಯನ್ ಆರ್ಥಿಕತೆಗೆ ಸಮನಾಗಿ ಮಾಡಲು ಪಕ್ಷವು ಯೋಜಿಸುತ್ತಿದೆ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಘೋಷಿಸಿದ್ದಾರೆ.
ಬಿಜೆಪಿ ಪ್ರಣಾಳಿಕೆಯು “ಭಯೋತ್ಪಾದಕ ಸಂಘಟನೆಗಳು ಮತ್ತು ಭಾರತ ವಿರೋಧಿ ಶಕ್ತಿಗಳ ಸ್ಲೀಪರ್ ಸೆಲ್ಗಳನ್ನು ಪತ್ತೆ ಮಾಡಲಿ, ಸಂಭಾವ್ಯ ಬೆದರಿಕೆಗಳನ್ನು ಗುರುತಿಸಲು ಮತ್ತು ತೊಡೆದುಹಾಕಲು ಮೂಲಭೂತೀಕರಣ ವಿರೋಧಿ ಘಟಕವನ್ನು ರಚಿಸುವ ಯೋಜನೆ ಹೊಂದಿದೆ” ಎಂದಿದ್ದಾರೆ..
“ನಾವು ಸಾರ್ವಜನಿಕ ಆಸ್ತಿಗೆ ಹಾನಿಗೆ ಸಂಬಂಧಿಸಿದ ಕಾನೂನನ್ನು ಸಹ ಮಾಡುತ್ತೇವೆ. ಸಾರ್ವಜನಿಕ ಆಸ್ತಿಯನ್ನು ಹಾನಿ ಮಾಡುವ ಮತ್ತು ಖಾಸಗಿ ಆಸ್ತಿಯ ಮೇಲೆ ದಾಳಿ ಮಾಡುವ ಸಮಾಜ ವಿರೋಧಿ ಶಕ್ತಿಗಳಿಂದ ವಸೂಲಿ ಮಾಡುವ ಬಗ್ಗೆ ಕಾನೂನು ರಚಿಸುತ್ತೇವೆ” ಎಂದು ನಡ್ಡಾ ಹೇಳಿದ್ದಾರೆ.
#GujaratElections2022: We will create an anti-radicalisation cell to identify and eliminate potential threats, and sleeper cells of the terrorist organisations and anti-India forces: BJP national president JP Nadda pic.twitter.com/prsGB0lbcB
— ANI (@ANI) November 26, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.