ಅಹಮದಾಬಾದ್: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ನರ್ಮದಾ ಬಚಾವೋ ಆಂದೋಲನ ಕಾರ್ಯಕರ್ತೆ ಮೇಧಾ ಪಾಟ್ಕರ್ ಭಾಗವಹಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಮತ್ತೆ ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಗುಜರಾತಿನ ಜನರ ವಿಶ್ವಾಸವನ್ನು ಮರಳಿ ಗೆಲ್ಲಲು ಕಾಂಗ್ರೆಸ್ ಅದರ ‘ಒಡೆದು ಆಳುವ’ ನೀತಿಯನ್ನು ಬಿಡಬೇಕು ಎಂದು ಕಿವಿಮಾತು ಹೇಳಿದ್ದಾರೆ.
ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಿ ಭವನಗರ ಜಿಲ್ಲೆಯ ಪಲಿತಾನಾ ಪಟ್ಟಣದಲ್ಲಿ ಚುನಾವಣಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಮೋದಿ, ಗುಜರಾತ್ ಜನರು ಕಾಂಗ್ರೆಸ್ ಅನ್ನು ತಿರಸ್ಕರಿಸಿದ್ದಾರೆ ಏಕೆಂದರೆ ಒಂದು ಪ್ರದೇಶ ಅಥವಾ ಸಮುದಾಯದ ಜನರನ್ನು ಕೆರಳಿಸುವ ಪಕ್ಷದ ನೀತಿಯಿಂದಾಗಿ ರಾಜ್ಯವು ಸಾಕಷ್ಟು ನಷ್ಟವನ್ನು ಅನುಭವಿಸಿದೆ ಎಂದಿದ್ದಾರೆ.
ಸೌರಾಷ್ಟ್ರದ ಒಣಗಿರುವ ಪ್ರದೇಶಕ್ಕೆ ನರ್ಮದಾ ನೀರು ತಲುಪುವುದನ್ನು ಅಡ್ಡಿಪಡಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಮೋದಿ ಆರೋಪಿಸಿದ್ದಾರೆ.
‘ಭಾರತವನ್ನು ಒಡೆಯಲು ಬಯಸುವ ಅಂಶಗಳನ್ನು ಬೆಂಬಲಿಸುವವರಿಗೆ ಸಹಾಯ ಮಾಡಲು ಗುಜರಾತ್ನ ಜನರು ಸಿದ್ಧರಿಲ್ಲ ಎಂದು ಅವರು ಹೇಳಿದ್ದಾರೆ.
40 ವರ್ಷಗಳ ಕಾಲ ಸರ್ದಾರ್ ಸರೋವರ ಅಣೆಕಟ್ಟು ಯೋಜನೆಯನ್ನು ಸ್ಥಗಿತಗೊಳಿಸಲು ಕಾರಣಕರ್ತರಾದ ವ್ಯಕ್ತಿಯ ಜೊತೆ ನಡೆಯುತ್ತಿರುವವರನ್ನು ಗುಜರಾತ್ ಜನತೆ ಎಂದಿಗೂ ಕ್ಷಮಿಸುವುದಿಲ್ಲ ಎಂದು ಅವರು ಹೇಳಿದರು.
182 ಸದಸ್ಯ ಬಲದ ಗುಜರಾತ್ ವಿಧಾನಸಭೆಗೆ ಡಿಸೆಂಬರ್ 1 ಮತ್ತು 5 ರಂದು ಚುನಾವಣೆ ನಿಗದಿಯಾಗಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.