ನವದೆಹಲಿ: ನವ ಭಾರತದ ಉದಯವು ಭಾರತೀಯ ತಂತ್ರಜ್ಞಾನದ ಬೆಳವಣಿಗೆಯೊಂದಿಗೆ ಆಳವಾಗಿ ಸಂಬಂಧ ಹೊಂದಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಅವರು ಹೇಳಿದ್ದಾರೆ.
ಇಂದು ನವದೆಹಲಿಯಲ್ಲಿ ನಡೆದ ಜಾಗತಿಕ ತಂತ್ರಜ್ಞಾನ ಶೃಂಗಸಭೆಯ ಏಳನೇ ಆವೃತ್ತಿಯಲ್ಲಿ ಅವರು ಮಾತನಾಡಿದರು.
ಇಂದು ತಂತ್ರಜ್ಞಾನವು ಭೌಗೋಳಿಕ ರಾಜಕೀಯದ ಹೃದಯ ಭಾಗದಲ್ಲಿದೆ. ತಂತ್ರಜ್ಞಾನವನ್ನು ಅನ್ವಯಿಸುವ ಮೂಲಕ ದೇಶಗಳು ತಮ್ಮ ರಾಷ್ಟ್ರೀಯ ಭದ್ರತಾ ನಿರ್ಧಾರಗಳನ್ನು ರೂಪಿಸಿಕೊಂಡಿವೆ ಎಂದು ಅವರು ಹೇಳಿದರು.
ತಂತ್ರಜ್ಞಾನದ ಬಗ್ಗೆ ಅಸಡ್ಡೆಯ ಪ್ರವೃತ್ತಿ ಹೊಂದಲು ಈಗ ಸಾಧ್ಯವಿಲ್ಲ ಎಂದು ಜೈಶಂಕರ್ ಹೇಳಿದ್ದಾರೆ.
ಬಲವಾದ ರಾಜಕೀಯ ಅರ್ಥಗಳು ತಂತ್ರಜ್ಞಾನದಲ್ಲಿ ಅಂತರ್ಗತವಾಗಿವೆ ಎಂದು ಅವರು ಒತ್ತಿ ಹೇಳಿದ್ದಾರೆ.
ಮೂರು ದಿನಗಳ ಶೃಂಗಸಭೆಯು ಜಿಯೋಟೆಕ್ನಾಲಜಿಯಲ್ಲಿ ಭಾರತದ ವಾರ್ಷಿಕ ಪ್ರಮುಖ ಕಾರ್ಯಕ್ರಮವಾಗಿದೆ ಮತ್ತು ಇದನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಕಾರ್ನೆಗೀ ಇಂಡಿಯಾ ಜಂಟಿಯಾಗಿ ಆಯೋಜನೆ ಮಾಡಿದೆ.
ಈ ವರ್ಷದ ಶೃಂಗಸಭೆಯ ಥೀಮ್ ಜಿಯೋಪಾಲಿಟಿಕ್ಸ್ ಆಫ್ ಟೆಕ್ನಾಲಜಿ ಆಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.