ನವದೆಹಲಿ: ಈಶಾನ್ಯ ಪ್ರದೇಶಕ್ಕೆ ಕೇಂದ್ರ ಸರ್ಕಾರವು ತ್ವರಿತಗತಿಯಲ್ಲಿ ವಾಯು ಸಂಪರ್ಕವನ್ನು ಒದಗಸುತ್ತಿದೆ. ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ನಾಗರಿಕ ವಿಮಾನಯಾನ ರಾಜ್ಯ ಸಚಿವ ಜನರಲ್ ವಿ.ಕೆ.ಸಿಂಗ್ ಅವರು ಮಂಗಳವಾರ ಈಶಾನ್ಯಕ್ಕೆ ಹಲವು ವಿಮಾನಗಳನ್ನು ಉದ್ಘಾಟಿಸಿದ್ದಾರೆ.
ಈಶಾನ್ಯ ಪ್ರದೇಶದಲ್ಲಿ ಹೆಚ್ಚಿನ ವಾಯು ಸಂಪರ್ಕವು ಈ ಪ್ರದೇಶದಲ್ಲಿ ಪ್ರವಾಸೋದ್ಯಮ ಮತ್ತು ವ್ಯಾಪಾರವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಮತ್ತು ರಾಜ್ಯಗಳ ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ.
ಸಿಂಧಿಯಾ ನಿನ್ನೆ ಇಟಾನಗರದಿಂದ ಕೋಲ್ಕತ್ತಾ ಮೂಲಕ ಮುಂಬೈಗೆ ಇಂಡಿಗೋ ವಿಮಾನವನ್ನು ಫ್ಲ್ಯಾಗ್ ಆಫ್ ಮಾಡಿದರು.
ಅಲಯನ್ಸ್ ಏರ್ ಎರಡು ಮಾರ್ಗಗಳಲ್ಲಿ ದಿಬ್ರುಗಢದಿಂದ ಇಟಾನಗರ ಮತ್ತು ಝಿರೋ ಹಾಗೂ ದಿಬ್ರುಗಢದಿಂದ ಇಟಾನಗರ ಮತ್ತು ಪಾಸಿಘಾಟ್ಗೆ ವಿಮಾನ ಸೇವೆಗಳನ್ನು ಪರಿಚಯಿಸಿದೆ.
ಕಳೆದ ಎಂಟು ವರ್ಷಗಳಲ್ಲಿ ನರೇಂದ್ರ ಮೋದಿ ಸರ್ಕಾರ ಈಶಾನ್ಯ ರಾಜ್ಯಗಳಿಗೆ ಅಭೂತಪೂರ್ವ ಆದ್ಯತೆ ನೀಡಿದೆ ಎಂದು ಸಿಂಧಿಯಾ ಈ ವೇಳೆ ಹೇಳಿದ್ದಾರೆ. ದೇಶದ ಪ್ರತಿಯೊಂದು ಮೂಲೆಗೂ ವಾಯು ಸಂಪರ್ಕವನ್ನು ಒದಗಿಸುವುದು ಪ್ರಧಾನ ಮಂತ್ರಿಯವರ ದೂರದೃಷ್ಟಿಯಾಗಿದೆ ಮತ್ತು ಅದನ್ನು ಸಾಕಾರಗೊಳಿಸಲು ವಿಮಾನಯಾನ ಸಚಿವಾಲಯವು ಪ್ರತಿ ರಾಜ್ಯಗಳ ಸಹಯೋಗದೊಂದಿಗೆ ಕೆಲಸ ಮಾಡುತ್ತಿದೆ ಎಂದಿದ್ದಾರೆ.
ಪ್ರಮುಖ ನಗರಗಳು ಮಾತ್ರವಲ್ಲದೆ ಶ್ರೇಣಿ 2 ಮತ್ತು ಶ್ರೇಣಿ 3 ನಗರಗಳ ದೂರದ ಪ್ರದೇಶಗಳಲ್ಲಿನ ಸುಧಾರಿತ ಲ್ಯಾಂಡಿಂಗ್ ಮೈದಾನಗಳನ್ನು ಸಹ ಸಂಪರ್ಕಿಸಲಾಗುವುದು ಎಂದಿದ್ದಾರೆ. ಏವಿಯೇಷನ್ ಟರ್ಬೈನ್ ಇಂಧನದ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಿದ್ದಕ್ಕಾಗಿ ಅರುಣಾಚಲ ಪ್ರದೇಶದ ರಾಜ್ಯ ಸರ್ಕಾರವನ್ನು ಅವರು ಶ್ಲಾಘಿಸಿದ್ದಾರೆ, ಇದು ವಾಯು ಸಂಪರ್ಕದಲ್ಲಿ ತ್ವರಿತ ಹೆಚ್ಚಳಕ್ಕೆ ಕಾರಣವಾಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.