News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಬೆಳಗಾವಿಗೆ ಬರುವ ನಿರ್ಧಾರದಿಂದ ಹಿಂದೆ ಸರಿದ ಮಹಾ ಸಚಿವ

ಬೆಂಗಳೂರು: ಗಡಿ ವಿವಾದದ ಕುರಿತು ಹೆಚ್ಚುತ್ತಿರುವ ಉದ್ವಿಗ್ನತೆಗಳ ನಡುವೆ ಬೆಳಗಾವಿಗೆ ಬಂದೇ ಬರುತ್ತೇನೆ ಎಂದು ಸವಾಲು ಹಾಕಿದ್ದ ಮಹಾರಾಷ್ಟ್ರದ ಸಚಿವರು ಇದೀಗ ಬೆಳಗಾವಿಗೆ ಆಗಮಿಸುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ

ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಮತ್ತು ಸಾರ್ವಜನಿಕ ಸುವ್ಯವಸ್ಥೆ ಮತ್ತು ಸೌಹಾರ್ದತೆಗೆ ಭಂಗ ಉಂಟು ಮಾಡುವ ಸಾಧ್ಯತೆಗಳ ಕುರಿತು ವಿವಿಧ ಕನ್ನಡ ಪರ ಸಂಘಟನೆಗಳು ಹಾಗೂ ಪೊಲೀಸ್ ವರದಿಗಳ ಮನವಿಗೆ ಪ್ರತಿಕ್ರಿಯಿಸಿದ ಬೆಳಗಾವಿ ಡಿಸಿ ನಿತೇಶ್ ಪಾಟೀಲ್ ಅವರು ಮಹಾರಾಷ್ಟ್ರ ಸಚಿವರಾದ ಚಂದ್ರಕಾಂತ್ ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ ಅವರ ಬೆಳಗಾವಿ ಪ್ರವೇಶವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದರು.

ಮಹಾರಾಷ್ಟ್ರ ರಾಜ್ಯ ಸಚಿವರು ಬೆಳಗಾವಿಗೆ ಆಗಮಿಸದಂತೆ ಸಿಎಂ ಬೊಮ್ಮಾಯಿ ಹಾಗೂ ರಾಜ್ಯ ಗೃಹ ಸಚಿವರು ಎಚ್ಚರಿಕೆ ನೀಡಿದ್ದರು. ಆದರೂ ಬೆಳಗಾವಿಗೆ ಬಂದೆ ಬರುತ್ತೇವೆ ಎಂದು ಮಹಾರಾಷ್ಟ್ರ ಸಚಿವರು ಹೇಳಿದ್ದ ಹಿನ್ನೆಲೆಯಲ್ಲಿ ಬೆಳಗಾವಿ ಡಿಸಿ ನಿರ್ಬಂಧ ಹೇರಿದ್ದಾರೆ.

ಇದರ ಬೆನ್ನಲ್ಲೇ ಮಹಾರಾಷ್ಟ್ರ ಸಚಿವರು ತಮ್ಮ ಭೇಟಿಯನ್ನು ರದ್ದುಗೊಳಿಸಿದ್ದಾರೆ ಎನ್ನಲಾಗಿದೆ. ವರದಿಗಳ ಪ್ರಕಾರ, ಡಾ ಬಿ ಆರ್ ಅಂಬೇಡ್ಕರ್ ಅವರ ಪುಣ್ಯತಿಥಿಯಂದು ಯಾವುದೇ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುವುದನ್ನು ತಪ್ಪಿಸಲು ಅವರು ತಮ್ಮ ಭೇಟಿಯನ್ನು ರದ್ದುಗೊಳಿಸಿದ್ದಾರೆ. ಬೆಳಗಾವಿಯಲ್ಲಿ ಅಂಬೇಡ್ಕರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಕರ್ನಾಟಕ ಸರ್ಕಾರ ಅವಕಾಶ ನೀಡಿದ್ದರೆ ಉತ್ತಮ ಎಂದು ಅವರು ಹಿಂದೆ ಹೇಳಿದ್ದರು.

ಮಹಾರಾಷ್ಟ್ರದ ಗಡಿಯಲ್ಲಿರುವ ಎಲ್ಲಾ ಪ್ರವೇಶ ಪಾಯಿಂಟ್‌ಗಳಲ್ಲಿ ಭಾರೀ ಪೊಲೀಸ್ ನಿಯೋಜನೆ ಮಾಡಲಾಗಿದೆ. ಯಾವುದೇ ಚಲನವಲನವನ್ನು ನಿರ್ಬಂಧಿಸಲು ಸುಮಾರು 21 ಚೆಕ್‌ಪೋಸ್ಟ್‌ಗಳನ್ನು ರಚಿಸಲಾಗಿದ್ದು, ಪೊಲೀಸರು ಅಲರ್ಟ್‌ನಲ್ಲಿದ್ದಾರೆ.

ಈ ನಡುವೆ ಪ್ರಸ್ತುತ ಮಹಾರಾಷ್ಟ್ರದಲ್ಲಿರುವ ಅಕ್ಕಲಕೋಟ ತಾಲೂಕಿನ 11 ಗ್ರಾಮ ಪಂಚಾಯಿತಿಗಳನ್ನು ಮಹಾಜನ್ ಆಯೋಗದ ವರದಿಯ ನಿಬಂಧನೆಗಳ ಪ್ರಕಾರ ಕರ್ನಾಟಕಕ್ಕೆ ಸೇರಿಸಲು ಕೋರಲಾಗಿದೆ.

ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಿರುವ ಮನವಿಯಲ್ಲಿ ಶೇಗಾಂವ್, ಕೊರ್ಸೆಗಾಂವ್, ಕಂಡೇವಾಡಿ ಖುರ್ದ್, ದೇವಿಕಾವಟೆ, ಶಾವಲ್, ಶೇಗಾಂವ್ ಬುದ್ರುಕ್, ಹಿಲ್ಲಿ, ಅಲಗೆ, ಮಂಗಲುರುಲ್ ಮತ್ತು ಧರಸಂಗ್ ಗ್ರಾಮಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಸಾಧ್ಯವಾಗದಿದ್ದರೆ ಕರ್ನಾಟಕದ ಭಾಗವಾಗಲು ಅನುಮತಿ ಕೋರಿ ಪತ್ರ ಬರೆಯಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top