ಬೆಂಗಳೂರು: 2021ನೇ ಸಾಲಿನ ‘ಏಕಲವ್ಯ’ ಜೀವಮಾನ ಸಾಧನೆ ಹಾಗೂ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಯನ್ನು ಇಂದು ಕ್ರೀಡಾ ಸಾಧನಕರಿಗೆ ರಾಜ್ಯ ರಾಜಧಾನಿಯಲ್ಲಿ ಪ್ರದಾನ ಮಾಡಲಾಯಿತು.
ಕ್ರೀಡಾ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗೈದ ಸಾಧಕರಿಗೆ ರಾಜ್ಯ ಸರ್ಕಾರದಿಂದ ನೀಡುವ ವಾರ್ಷಿಕ ಪ್ರಶಸ್ತಿ ಇದಾಗಿದೆ. ಏಕಲವ್ಯ ಪ್ರಶಸ್ತಿಯು ಏಕಲವ್ಯ ಕಂಚಿನ ಪ್ರತಿಮೆ, ಪ್ರಶಸ್ತಿ ಪತ್ರ, ಸಮವಸ್ತ್ರ, 2 ಲಕ್ಷ ರೂ. ನಗದು ಬಹುಮಾನ ಒಳಗೊಂಡಿರುತ್ತದೆ.
ಅಲ್ಲದೇ ಈ ಸಂದರ್ಭದಲ್ಲಿ 2022-23 ನೇ ಸಾಲಿನ ಕ್ರೀಡಾ ಪೋಷಕ ಪ್ರಶಸ್ತಿ, 36 ನೇ ರಾಷ್ಟ್ರೀಯ ಕ್ರೀಡಾಕೂಟದ ಪದಕ ವಿಜೇತ ಕ್ರೀಡಾಪಟುಗಳಿಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು
ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.
ಈ ವೇಳೆ ಮಾತನಾಡಿದ ಮುಖ್ಯಮಂತ್ರಿಗಳು, “ಯುವ ಸಾಧಕರು ದೇಶದ ಅತ್ಯುನ್ನತ ಆಸ್ತಿಗಳು ಮತ್ತು ಪ್ರೇರಕ ಶಕ್ತಿಗಳಾಗಿದ್ದಾರೆ. ಸಾಧನೆಯ ಹಿಂದೆ ದೊಡ್ಡ ಪರಿಶ್ರಮವಿರುತ್ತದೆ. ಏಕಾಗ್ರತೆಯಿಂದ ಪರಿಶ್ರಮ ಪಟ್ಟರೆ ಯಶಸ್ಸು ಸಾಧ್ಯವಾಗುತ್ತದೆ. ಪ್ರಸ್ತುತ ಕೇಂದ್ರ ಮತ್ತು ರಾಜ್ಯ ಸರ್ಕಾರ ಕ್ರೀಡೆಗೆ ಮಹತ್ವ ಕೊಡುತ್ತಿದೆ” ಎಂದಿದ್ದಾರೆ.
“ಖೇಲೋ ಇಂಡಿಯಾ, ಫಿಟ್ ಇಂಡಿಯಾ, ಜಿತೋ ಇಂಡಿಯಾ, ಮತ್ತಿತರ ಕ್ರೀಡಾ ಪ್ರೋತ್ಸಾಹಗಳ ಮೂಲಕ ಪ್ರಧಾನಿ ನರೇಂದ್ರ ಮೋದಿ ಕ್ರೀಡೆಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಕಳೆದ ವರ್ಷ ಆಗಸ್ಟ್ 15 ರಂದು ಮುಂದಿ ಮುಂದಿನ ಪ್ಯಾರೀಸ್ ಒಲಿಂಪಿಕ್ಸ್ ಗೆ 75 ಕ್ರೀಡಾಪಟುಗಳನ್ನು ದತ್ತು ಪಡೆದಿದ್ದೇವೆ. ಅವರಿಗೆ ನಾಲ್ಕು ವರ್ಷಗಳ ಕಾಲ ತರಬೇತಿ, ವಿದ್ಯಾಭ್ಯಾಸ ನೀಡಲಾಗುತ್ತಿದೆ. ಅವರಿಗೆ 10 ಲಕ್ಷ ನೀಡಲಾಗುತ್ತಿದೆ. ಅಗತ್ಯವಿದ್ದರೆ ಇನ್ನೂ 10 ಲಕ್ಷ ರೂ. ಅನುದಾನ ನೀಡಲಾಗುವುದು” ಎಂದಿದ್ದಾರೆ.
ಮುಖ್ಯಮಂತ್ರಿ @BSBommai ಅವರು ರಾಜ್ಯಪಾಲ @TCGEHLOT ಅವರೊಂದಿಗೆ ಏಕಲವ್ಯ ಕ್ರೀಡಾ ಪ್ರಶಸ್ತಿ ಹಾಗೂ ಇತರ ಕ್ರೀಡಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದರು.
1/2 pic.twitter.com/u82qaf9vmz— CM of Karnataka (@CMofKarnataka) December 6, 2022
2021ನೇ ಸಾಲಿನ "ಏಕಲವ್ಯ " ಜೀವಮಾನ ಸಾಧನೆ ಕರ್ನಾಟಕ ಕ್ರೀಡಾ ರತ್ನ ಹಾಗೂ 2022-23 ನೇ ಸಾಲಿನ ಕ್ರೀಡಾ ಪೋಷಕ ಪ್ರಶಸ್ತಿ, 36 ನೇ ರಾಷ್ಟ್ರೀಯ ಕ್ರೀಡಾಕೂಟದ ಪದಕ ವಿಜೇತ ಕ್ರೀಡಾಪಟುಗಳಿಗೆ ನಗದು ಪುರಸ್ಕಾರ ಪ್ರಧಾನ ಸಮಾರಂಭ, ಬೆಂಗಳೂರು. https://t.co/po4j5FKDD0
— Basavaraj S Bommai (@BSBommai) December 6, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.