News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕಳೆದ ವರ್ಷ ನೈಸರ್ಗಿಕ ಕೃಷಿ ಅಡಿಯಲ್ಲಿ ಬಂದಿವೆ 4.78 ಲಕ್ಷ ಹೆಕ್ಟೇರ್ ಪ್ರದೇಶ

ನವದೆಹಲಿ: ಶೂನ್ಯ ಬಜೆಟ್ ಕೃಷಿಗೆ ಸರ್ಕಾರದ ಉತ್ತೇಜನದ ಫಲವಾಗಿ ಭಾರತೀಯ ರೈತರು ಕಳೆದ ವರ್ಷ 17 ರಾಜ್ಯಗಳನ್ನು ಒಳಗೊಂಡಂತೆ ಹೆಚ್ಚುವರಿ 4.78 ಲಕ್ಷ ಹೆಕ್ಟೇರ್ ಪ್ರದೇಶವನ್ನು ನೈಸರ್ಗಿಕ ಕೃಷಿ ಅಡಿಯಲ್ಲಿ ತಂದಿದ್ದಾರೆ.

ನೈಸರ್ಗಿಕ ಕೃಷಿಯನ್ನು ಉತ್ತೇಜಿಸಲು, ಕೇಂದ್ರ ಸರ್ಕಾರವು 1,584 ಕೋಟಿ ರೂಪಾಯಿ ವೆಚ್ಚದಲ್ಲಿ ನೈಸರ್ಗಿಕ ಕೃಷಿಯ ರಾಷ್ಟ್ರೀಯ ಮಿಷನ್ ಅನ್ನು ಪ್ರತ್ಯೇಕ ಯೋಜನೆಯಾಗಿ ಅನುಮೋದಿಸಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸುಸ್ಥಿರ ಕೃಷಿಗಾಗಿ ಮಣ್ಣಿನ ಆರೋಗ್ಯ ನಿರ್ವಹಣೆಯ ರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ವೇಳೆ ಹೇಳಿದ್ದಾರೆ.

ನಮಾಮಿ ಗಂಗೆ ಕಾರ್ಯಕ್ರಮದ ಅಡಿಯಲ್ಲಿ, ಗಂಗಾ ನದಿಯ ದಡದಲ್ಲಿ ನೈಸರ್ಗಿಕ ಕೃಷಿಯ ಯೋಜನೆಯು ನಡೆಯುತ್ತಿದೆ. ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಮತ್ತು ಎಲ್ಲಾ ಕೃಷಿ ವಿಜ್ಞಾನ ಕೇಂದ್ರಗಳು (KVKs), ಕೇಂದ್ರ ಮತ್ತು ರಾಜ್ಯ ಕೃಷಿ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು . ನೈಸರ್ಗಿಕ ಕೃಷಿಯನ್ನು ಉತ್ತೇಜಿಸಲು ಸರ್ವತೋಮುಖ ಪ್ರಯತ್ನಗಳನ್ನು ನಡೆಸುತ್ತಿವೆ ಎಂದು ಕೃಷಿ ಸಚಿವಾಲಯದ ಹೇಳಿಕೆ ತಿಳಿಸಿದೆ.

“ರಾಸಾಯನಿಕ ಕೃಷಿಯಿಂದಾಗಿ ಮಣ್ಣಿನ ಫಲವತ್ತತೆ ಕುಸಿಯುತ್ತಿದ್ದು, ಮುಂದಿನ ದಿನಗಳಲ್ಲಿ ಹವಾಮಾನ ಬದಲಾವಣೆಯು ದೇಶ ಮತ್ತು ವಿಶ್ವಾದ್ಯಂತ ದೊಡ್ಡ ಆತಂಕಕ್ಕೆ ಕಾರಣವಾಗಲಿದೆ. ಮಣ್ಣಿನಲ್ಲಿ ಸಾವಯವ ಇಂಗಾಲದ ಕೊರತೆ ಗಂಭೀರ ವಿಷಯವಾಗಿದೆ. ಈ ಗಂಭೀರ ಸವಾಲನ್ನು ಎದುರಿಸಲು ಮತ್ತು ಉತ್ತಮ ಮಣ್ಣಿನ ಆರೋಗ್ಯಕ್ಕಾಗಿ, ನಾವು ನೈಸರ್ಗಿಕ ಕೃಷಿಯನ್ನು ಉತ್ತೇಜಿಸಬೇಕಾಗಿದೆ, ಇದು ಪರಿಸರಕ್ಕೆ ಪ್ರಯೋಜನಕಾರಿಯಾಗಿದೆ” ಎಂದು ಕೇಂದ್ರ ಸಚಿವರು ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.

ನೈಸರ್ಗಿಕ ಕೃಷಿ ಪದ್ಧತಿಯು ರೈತರು ಕೃಷಿಗಾಗಿ ಬಳಸುತ್ತಿದ್ದ ಪ್ರಾಚೀನ ತಂತ್ರವಾಗಿದೆ ಮತ್ತು ಆ ಸಮಯದಲ್ಲಿ ಜನರು ಪ್ರಕೃತಿಯೊಂದಿಗೆ ಹೇಗೆ ಸಾಮರಸ್ಯದಿಂದ ಬದುಕಬೇಕು ಎಂದು ತಿಳಿದಿದ್ದರು. ಆಂಧ್ರಪ್ರದೇಶ, ಗುಜರಾತ್, ಹಿಮಾಚಲ ಪ್ರದೇಶ, ಒಡಿಶಾ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ, ತಮಿಳುನಾಡು ಮುಂತಾದ ರಾಜ್ಯಗಳು ನೈಸರ್ಗಿಕ ಕೃಷಿಯನ್ನು ಉತ್ತೇಜಿಸಲು ಅನೇಕ ಆವಿಷ್ಕಾರಗಳನ್ನು ಮಾಡಿವೆ ಎಂದಿದ್ದಾರೆ.

ಇದುವರೆಗೆ ಎರಡು ಹಂತಗಳಲ್ಲಿ ದೇಶದಾದ್ಯಂತ 22 ಕೋಟಿಗೂ ಹೆಚ್ಚು ಮಣ್ಣಿನ ಆರೋಗ್ಯ ಕಾರ್ಡ್‌ಗಳನ್ನು ರೈತರಿಗೆ ವಿತರಿಸಲಾಗಿದೆ ಎಂದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top