News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ʼಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷʼ ಪ್ರಸ್ತಾವನೆಗೆ ಬೆಂಬಲ: ಜಾಗತಿಕ ಸಮುದಾಯಕ್ಕೆ ಮೋದಿ ಧನ್ಯವಾದ

ನವದೆಹಲಿ: ಭಾರತವು ಅಂತರರಾಷ್ಟ್ರೀಯ ಸಿರಿಧಾನ್ಯ ವರ್ಷ 2023 ರ ಆಚರಣೆಯನ್ನು ಮುನ್ನಡೆಸುತ್ತದೆ ಮತ್ತು ಪೌಷ್ಟಿಕ-ಧಾನ್ಯಗಳ ಕೃಷಿ ಮತ್ತು ಬಳಕೆಯನ್ನು ಉತ್ತೇಜಿಸಲು ಅಭಿಯಾನಗಳನ್ನು ಆಯೋಜಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇಟಲಿಯ ರೋಮ್‌ನಲ್ಲಿ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆ (ಎಫ್‌ಎಒ) ಆಯೋಜಿಸಿದ್ದ ಅಂತರರಾಷ್ಟ್ರೀಯ ಸಿರಿಧಾನ್ಯ ವರ್ಷ (ಐವೈಎಂ) – 2023 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರ ಸಂದೇಶವನ್ನು ಪ್ರಸ್ತುತಪಡಿಸಲಾಯಿತು.

ಉದ್ಘಾಟನಾ ಸಮಾರಂಭದಲ್ಲಿ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದ ಭಾರತೀಯ ನಿಯೋಗ ಭಾಗವಹಿಸಿದೆ.

ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಭಾರತದ  ಸಂದೇಶವನ್ನು ಶೋಭಾ ಕರಂದ್ಲಾಜೆಯವರು ತಿಳಿಸಿದರು.

 ”ಭಾರತವು ವಿಶ್ವಾದ್ಯಂತ ಅಂತರರಾಷ್ಟ್ರೀಯ ಸಿರಿಧಾನ್ಯ ವರ್ಷ2023 ಆಚರಣೆಗಳನ್ನು ಮುನ್ನಡೆಸುತ್ತದೆ ಮತ್ತು ಸಿರಿಧಾನ್ಯ ಕೃಷಿ ಮತ್ತು ಬಳಕೆಯನ್ನು ಉತ್ತೇಜಿಸಲು ಅಭಿಯಾನಗಳನ್ನು ಆಯೋಜಿಸುತ್ತದೆ” ಎಂದು ಮೋದಿ ಸಂದೇಶದಲ್ಲಿ ಹೇಳಿದ್ದಾರೆ.

ಅಲ್ಲದೇ ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವನ್ನು ಆಚರಿಸುವ ಭಾರತದ ಪ್ರಸ್ತಾವನೆಯನ್ನು ಬೆಂಬಲಿಸಿದ್ದಕ್ಕಾಗಿ ಜಾಗತಿಕ ಸಮುದಾಯಕ್ಕೆ ಧನ್ಯವಾದಗಳನ್ನು ಮೋದಿ ಅರ್ಪಿಸಿದ್ದಾರೆ.

”ಗ್ರಾಹಕ, ಬೆಳೆಗಾರ ಹಾಗೂ ಹವಾಗುಣಕ್ಕೆ ಸಿರಿಧಾನ್ಯ ಉತ್ತಮ. ಸಿರಿಧಾನ್ಯ ಪೌಷ್ಠಿಕಾಂಶದಿಂದ ಕೂಡಿದ್ದು, ಕಡಿಮೆ ನೀರು ಸೇವಿಸುವುದರ ಜೊತೆಗೆ ಅರೆ-ಶುಷ್ಕ ವಲಯಗಳಲ್ಲಿ ಬೆಳೆಯಬಹುದು” ಎಂದಿದ್ದಾರೆ.

ಕರಂದ್ಲಾಜೆ ಅವರು ತಮ್ಮ ಭಾಷಣದಲ್ಲಿ, ಸುಸ್ಥಿರ ಭವಿಷ್ಯವನ್ನು ಅಭಿವೃದ್ಧಿಪಡಿಸಲು ರಾಷ್ಟ್ರಗಳು ಸಹಕರಿಸಬೇಕಾಗಿದೆ ಮತ್ತು ಈ ಪ್ರಕ್ರಿಯೆಯಲ್ಲಿ ಸಿರಿಧಾನ್ಯ ಪ್ರಮುಖ ಪಾತ್ರ ವಹಿಸುತ್ತದೆ ಎಂದಿದ್ದಾರೆ.

ಅಂತಾರಾಷ್ಟ್ರೀಯ ಸಿರಧಾನ್ಯ ವರ್ಷ 2023 ಭಾರತವನ್ನು ಆಹಾರ ಮತ್ತು ಪೌಷ್ಟಿಕಾಂಶದ ಭದ್ರತೆಯತ್ತ ಕೊಂಡೊಯ್ಯುತ್ತದೆ ಎಂದು ಅವರು ಹೇಳಿದರು.

ಸಿರಿಧಾನ್ಯಗಳನ್ನು ‘ಸ್ಮಾರ್ಟ್ ಫುಡ್’ ಎಂದು ಪರಿಗಣಿಸಲಾಗುತ್ತದೆ ಏಕೆಂದರೆ ಅವುಗಳು ಕೃಷಿ ಮಾಡಲು ಸುಲಭ, ಹೆಚ್ಚಾಗಿ ಸಾವಯವ ಮತ್ತು ಹೆಚ್ಚಿನ ಪೌಷ್ಟಿಕಾಂಶದ ಮೌಲ್ಯವನ್ನು ಹೊಂದಿರುತ್ತದೆ ಎಂದು

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top