News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೆಲಿಂಡಾ ಗೇಟ್ಸ್ ಜೊತೆ ಕೃಷಿ ಸಚಿವರ ಸಭೆ: ಕೃಷಿ ಹೂಡಿಕೆ ಪೋರ್ಟಲ್‌ಗೆ ಚಾಲನೆ

ನವದೆಹಲಿ: ಬಿಲ್ & ಮೆಲಿಂಡಾ ಗೇಟ್ಸ್ ಫೌಂಡೇಶನ್‌ನ ಸಹ-ಅಧ್ಯಕ್ಷರಾದ ಮೆಲಿಂಡಾ ಫ್ರೆಂಚ್ ಗೇಟ್ಸ್ ಅವರು ನಿನ್ನೆ ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ  ನರೇಂದ್ರ ಸಿಂಗ್ ತೋಮರ್ ಅವರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ  ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಸಮಗ್ರ “ಅಗ್ರಿಕಲ್ಚರ್‌ ಇನ್‌ವೆಸ್ಟ್‌ಮೆಂಟ್ ಪೋರ್ಟಲ್” ಅನ್ನು ಉದ್ಘಾಟಿಸಲಾಯಿತು.

ಸಭೆಯಲ್ಲಿ  ತೋಮರ್ ಮಾತನಾಡಿ, ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸರ್ಕಾರವು ದೇಶದ ರೈತ ಮಹಿಳೆಯರನ್ನು ಉತ್ತೇಜಿಸುವತ್ತ ಸಂಪೂರ್ಣವಾಗಿ ಗಮನಹರಿಸಿದೆ ಎಂದರು.

“ಕೃಷಿ ಕ್ಷೇತ್ರದಲ್ಲಿ ಅನೇಕ ಸವಾಲುಗಳಿವೆ, ಅದನ್ನು ಪರಿಹರಿಸಲು ಭಾರತ ಸರ್ಕಾರವು ಪ್ರಧಾನ ಮಂತ್ರಿ  ಮೋದಿಯವರ ನೇತೃತ್ವದಲ್ಲಿ ನಿರಂತರವಾಗಿ ದಕ್ಷತೆಯಿಂದ ಕೆಲಸ ಮಾಡುತ್ತಿದೆ. ದೇಶದಲ್ಲಿ ಸಣ್ಣ ರೈತರ ಸಂಖ್ಯೆ ಹೆಚ್ಚಿದ್ದು, ಅವರ ಬಲ ಹೆಚ್ಚಿದರೆ ಕೃಷಿ ಕ್ಷೇತ್ರವೂ ಸುಧಾರಿಸುತ್ತದೆ ಮತ್ತು ಉತ್ಪಾದನೆಯೂ ಹೆಚ್ಚುತ್ತದೆ ಎಂಬ ನಂಬಿಕೆ ಸರ್ಕಾರದ್ದು, ಈ ನಿಟ್ಟಿನಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದೆ” ಎಂದರು.

“ಭಾರತದಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಂಪ್ರದಾಯಿಕ ಕೃಷಿ ವಿಧಾನಗಳು ನಡೆಯುತ್ತಿದ್ದವು, ಪ್ರಸ್ತುತ ದೃಷ್ಟಿಕೋನದಲ್ಲಿ ಕೃಷಿ ವಲಯದಲ್ಲಿ ಹೂಡಿಕೆಯ ಅವಶ್ಯಕತೆಯಿದೆ, ಈ ನಿಟ್ಟಿನಲ್ಲಿ ಸರ್ಕಾರವು ಅನೇಕ ಸುಧಾರಣೆಗಳನ್ನು ಪ್ರಾರಂಭಿಸಿದೆ, ಕೃಷಿಯಲ್ಲಿ ತಂತ್ರಜ್ಞಾನವನ್ನು ಅಳವಡಿಸಿದೆ. ಅರ್ಹ ರೈತರಿಗೆ ಪಾರದರ್ಶಕತೆಯೊಂದಿಗೆ ಸಹಾಯವನ್ನು ಒದಗಿಸಲಾಗಿದೆ, ಡಿಜಿಟಲ್ ಕೃಷಿ ಮಿಷನ್ ಅನ್ನು ದೇಶದಲ್ಲಿ ಪ್ರಾರಂಭಿಸಲಾಗಿದೆ. ಕೃಷಿಯಲ್ಲಿ ಹೂಡಿಕೆಯನ್ನು ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ ಭಾರತ ಸರ್ಕಾರವು ಆತ್ಮನಿರ್ಭರ ಭಾರತ್ ಅಭಿಯಾನದಡಿಯಲ್ಲಿ ಕೃಷಿ ಮತ್ತು ಸಂಬಂಧಿತ ವಲಯಗಳಿಗೆ 1.5 ಲಕ್ಷ ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಅನ್ನು ನಿಗದಿಪಡಿಸಿದೆ” ಎಂದು ತೋಮರ್ ಹೇಳಿದ್ದಾರೆ.

“ಭಾರತದಲ್ಲಿ ಕೃಷಿ ಕ್ಷೇತ್ರದಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಕೆಲಸ ಮಾಡುತ್ತಿದ್ದಾರೆ. ಅವರ ಸಂಖ್ಯೆಯನ್ನು ಹೆಚ್ಚಿಸಲು ಮತ್ತು ಅವರ ನಿರಂತರ ಪ್ರಗತಿಗಾಗಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯವು ಮಹಿಳಾ ರೈತರ ಸಬಲೀಕರಣಕ್ಕಾಗಿ ಒಂದು ಯೋಜನೆಯನ್ನು ಸಹ ನಡೆಸುತ್ತಿದೆ, ಇದರಲ್ಲಿ ಕೃಷಿ ಸಚಿವಾಲಯವು ಪಾಲುದಾರಿಕೆಯನ್ನು ಹೊಂದಿದೆ. ಕೃಷಿ ಸಚಿವಾಲಯವು ತನ್ನ ಬಜೆಟ್‌ನ ನಿರ್ದಿಷ್ಟ ಭಾಗವನ್ನು ಮಹಿಳಾ ರೈತರ ಉನ್ನತಿಗಾಗಿ ವ್ಯಯಿಸುತ್ತದೆ. “ಕೃಷಿ ನಿವಾಸ್ ಪೋರ್ಟಲ್” (ಕೃಷಿ ಹೂಡಿಕೆ ಪೋರ್ಟಲ್) ಕೃಷಿ ವಲಯದಲ್ಲಿ ಹೂಡಿಕೆಯ ವಿಷಯದಲ್ಲಿ ಒಂದು ಮೈಲಿಗಲ್ಲು ಎಂದು ಸಾಬೀತುಪಡಿಸುತ್ತದೆ” ಎಂದು ತೋಮರ್ ಹೇಳಿದ್ದಾರೆ.

ಭಾರತದ ವಿವಿಧ ಕ್ಷೇತ್ರಗಳಲ್ಲಿ ಗೇಟ್ಸ್ ಫೌಂಡೇಶನ್ ಮಾಡುತ್ತಿರುವ ಕೆಲಸವನ್ನು ಶ್ಲಾಘಿಸಿದ  ತೋಮರ್, ಫೌಂಡೇಶನ್‌ ಭಾರತದಲ್ಲಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡುವುದು ಉತ್ತಮ ಅನುಭವವನ್ನು ನೀಡುತ್ತದೆ ಎಂದು ಆಶಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top