News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸಶಸ್ತ್ರ ಪಡೆಗಳ ಧ್ವಜ ದಿನ: ಯೋಧರ ಕಲ್ಯಾಣಕ್ಕೆ ಕೊಡುಗೆ ನೀಡುವಂತೆ ಕರೆ

ನವದೆಹಲಿ: ಇಂದು ದೇಶಾದ್ಯಂತ ಸಶಸ್ತ್ರ ಪಡೆಗಳ ಧ್ವಜ ದಿನವನ್ನು ಆಚರಿಸಲಾಗುತ್ತಿದೆ. ಮಾತೃಭೂಮಿಯನ್ನು ರಕ್ಷಿಸುತ್ತಿರುವ ಸಶಸ್ತ್ರ ಪಡೆಗಳ ವೀರ ಯೋಧರನ್ನು ಗೌರವಿಸಲು ಪ್ರತಿ ವರ್ಷ ಡಿಸೆಂಬರ್ 7 ರಂದು ಈ ದಿನವನ್ನು ಆಚರಿಸಲಾಗುತ್ತದೆ.

ಸಶಸ್ತ್ರ ಪಡೆಗಳ ಸಿಬ್ಬಂದಿಯ ಕಲ್ಯಾಣಕ್ಕಾಗಿ ಜನರಿಂದ ನಿಧಿಯನ್ನು ಸಂಗ್ರಹಿಸಲು ಈ ದಿನವನ್ನು ಮೀಸಲಿಡಲಾಗಿದೆ. ಈ ದಿನದಂದು ಸಂಗ್ರಹಿಸಿದ ನಿಧಿಯನ್ನು ಸೇವೆಯಲ್ಲಿರುವ ಸಿಬ್ಬಂದಿ ಮತ್ತು ಮಾಜಿ ಸೈನಿಕರ ಕಲ್ಯಾಣಕ್ಕಾಗಿ ಬಳಸಲಾಗುತ್ತದೆ.

ಸಶಸ್ತ್ರ ಪಡೆಗಳ ಧ್ವಜ ದಿನವು ಸಶಸ್ತ್ರ ಪಡೆಗಳ ಶೌರ್ಯ, ಧೈರ್ಯ ಮತ್ತು ತ್ಯಾಗವನ್ನು ನೆನಪಿಸುವ ದಿನವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ವೀಡಿಯೊ ಸಂದೇಶದಲ್ಲಿ ಸಿಂಗ್ ಅವರು ಭಾರತದ ವೀರ ಯೋಧರ ಕಲ್ಯಾಣಕ್ಕಾಗಿ ಸಶಸ್ತ್ರ ಪಡೆಗಳ ಧ್ವಜ ದಿನದ ನಿಧಿಗೆ ಕೊಡುಗೆ ನೀಡುವಂತೆ ಎಲ್ಲರಿಗೂ ಮನವಿ ಮಾಡಿದ್ದಾರೆ.

ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು ಕೂಡ ಜನರಿಗೆ ಯೋಧರ ಕಲ್ಯಾಣಕ್ಕಾಗಿ ಕೊಡುಗೆ ನೀಡುವಂತೆ ಕರೆ ನೀಡಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top