News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ದೇಶಾದ್ಯಂತ ಕಲುಷಿತ ನೀರು ಪರೀಕ್ಷೆಗೆ 2,000 ಪ್ರಯೋಗಾಲಯ ಸ್ಥಾಪನೆ

ನವದೆಹಲಿ: ಜಲಜೀವನ್ ಮಿಷನ್ ನಡಿ ಗ್ರಾಮೀಣ ಭಾಗದ ಎಲ್ಲ ಮನೆಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಕೇಂದ್ರ ಸರ್ಕಾರ ಹಲವು ಉಪಕ್ರಮಗಳನ್ನು ಕೈಗೊಂಡಿದೆ ಎಂದು ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಲೋಕಸಭೆಗೆ ತಿಳಿಸಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ ಅವರು, ಜಲಜೀವನ್ ಮಿಷನ್ ಅಡಿ ಎಲ್ಲಾ ಮನೆಗಳಿಗೆ ಸ್ವಚ್ಛ ಮತ್ತು ಅಗತ್ಯ ಪ್ರಮಾಣದ ಕುಡಿಯುವ ನೀರು ಪೂರೈಸಲು ಸರ್ಕಾರ ಮೂಲಸೌಕರ್ಯ ಒದಗಿಸುತ್ತಿದೆ. ಜಲ, ರಾಜ್ಯದ ವಿಷಯವಾಗಿದ್ದು, ಈ ಯೋಜನೆಯ ಸಮಗ್ರ ಯೋಜನಾ ವರದಿ ರೂಪಿಸುವುದು, ಯೋಜನೆಯ ಅನುಷ್ಠಾನ, ಕಾರ್ಯಾಚರಣೆ ಮತ್ತು ನಿರ್ವಹಣೆ, ರಾಜ್ಯಗಳ ಜವಾಬ್ದಾರಿಯಾಗಿದೆ. ಇದಕ್ಕೆ ಪೂರಕವಾಗಿ ಕೇಂದ್ರ ಸರ್ಕಾರ ಹಣಕಾಸು ಮತ್ತು ತಾಂತ್ರಿಕ ನೆರವನ್ನು ಒದಗಿಸುತ್ತಿದೆ ಎಂದರು.

ಕಲುಷಿತ ನೀರು ಪರೀಕ್ಷಿಸಲು ದೇಶಾದ್ಯಂತ 2 ಸಾವಿರ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗಿದ್ದು, ಈ ಮೂಲಕ ನೀರಿನ ಗುಣಮಟ್ಟದ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಸುಮಾರು 15 ಲಕ್ಷ ಜನರು ಕ್ಷೇತ್ರ ಪರೀಕ್ಷೆಗಳಲ್ಲಿ ತರಬೇತಿ ಪಡೆದಿದ್ದಾರೆ. 2022-23ನೇ ಸಾಲಿನಲ್ಲಿ 75 ಲಕ್ಷ ಮಾದರಿಗಳನ್ನು ಸಂಗ್ರಹಿಸಿ, ಯಾವುದೇ ಕಲುಷಿತ ಅಂಶ ಒಳಗೊಂಡಿದೆಯೇ ಎಂಬುದನ್ನು ಪರೀಕ್ಷಿಸಲಾಗಿದ್ದು, ಅದರಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಕೋವಿಡ್ ಸಾಂಕ್ರಾಮಿಕದ ನಂತರ ದೇಶದಲ್ಲಿ ವಿಮಾನ ಪ್ರಯಾಣಿಕರ ಸಂಖ್ಯೆ ಅಧಿಕವಾಗಿದ್ದು, ಅದರಂತೆ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಸದನಕ್ಕೆ ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಅವರು, ಕೆಲ ದಿನಗಳ ಹಿಂದೆ ದೇಶದಲ್ಲಿ ವಿಮಾನ ಪ್ರಯಾಣಿಕರ ಸಂಖ್ಯೆ ದಿನಕ್ಕೆ 4 ಲಕ್ಷದ 13 ಸಾವಿರಕ್ಕೆ ದಾಖಲೆಯ ಏರಿಕೆಯಾಗಿದೆ. ಹಬ್ಬಗಳ ದಿನಗಳಲ್ಲಿ ಪ್ರಯಾಣಿಕರ ದಟ್ಟಣೆಯಲ್ಲಿ ಏರಿಕೆ ಕಂಡುಬರುತ್ತಿದ್ದು, ಅದರಂತೆ ನಿಲ್ದಾಣಗಳ ಟರ್ಮಿನಲ್ ಗಳಲ್ಲಿ ಯಾವುದೇ ತೊಂದರೆಯಾಗದಂತೆ ತ್ವರಿತ ವಿಮಾನ ಹತ್ತಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಉಡಾನ್ ಯೋಜನೆಯಡಿ ಕಳೆದ 8 ವರ್ಷಗಳಲ್ಲಿ 70 ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ 2024ಕ್ಕೆ ಕಾರ್ಯಾರಂಭವಾಗಲಿದ್ದು, ಮತ್ತೊಂದು ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣಕ್ಕೆ ರಾಜ್ಯ ಸರ್ಕಾರದೊಂದಿಗೆ ಕೇಂದ್ರ ಕಾರ್ಯನಿರ್ವಹಿಸುತ್ತಿದೆ ಎಂದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top