News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಹಿಮಾಚಲದಲ್ಲಿ 4 ಸಿಎಂ ಆಕಾಂಕ್ಷಿಗಳು: ಕಾಂಗ್ರೆಸ್‌ಗೆ ಎದುರಾಗಿದೆ ಸವಾಲು

ಶಿಮ್ಲಾ: ಹಿಮಾಚಲ ಪ್ರದೇಶವನ್ನು ಗೆದ್ದ ನಂತರ ಕಾಂಗ್ರೆಸ್‌ ಪಕ್ಷಕ್ಕೆ ಮತ್ತೊಂದು ಸವಾಲು ಎದುರಾಗಿದೆ. ಒಂದು ಮುಖ್ಯಮಂತ್ರಿ ಹುದ್ದೆಗೆ ನಾಲ್ಕು ಮಂದಿ ಪ್ರಬಲರು ಗುದ್ದಾಟ ಆರಂಭಿಸಿದ್ದಾರೆ. ಹೀಗಾಗಿ ಆ ಪಕ್ಷಕ್ಕೆ ಮುಖ್ಯಮಂತ್ರಿಯ ಆಯ್ಕೆ ಬಲು ಸವಾಲಿನ ಕಾರ್ಯವಾಗಿ ಮಾರ್ಪಟ್ಟಿದೆ.

ಇಂದು ಕಾಂಗ್ರೆಸ್ ತನ್ನ ಶಾಸಕರ ಸಭೆಯನ್ನು ಕರೆದಿದ್ದು, ಮುಖ್ಯಮಂತ್ರಿಯನ್ನು ನಿರ್ಧರಿಸುವುದು ಸಭೆಯ ಹಿಂದಿನ ಉದ್ದೇಶವಾಗಿದೆ. ಆದರೆ ಇದು ಸುಲಭದ ಮಾತಲ್ಲ ಎಂಬ ಅಭಿಪ್ರಾಯಗಳು ವ್ಯಕ್ತವಾಗಿದೆ. ಕಾಂಗ್ರೆಸ್‌ಗೆ ಆಯ್ಕೆ ಮಾಡಲು ಕನಿಷ್ಠ ನಾಲ್ಕು ಅಭ್ಯರ್ಥಿಗಳಿದ್ದಾರೆ.

ಶಿಮ್ಲಾದ ರಾಡಿಸನ್ ಹೋಟೆಲ್‌ನಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ನಡೆಯಲಿದೆ.

ಮುಖ್ಯಮಂತ್ರಿ ರೇಸ್‌ನಲ್ಲಿ ಮುಂಚೂಣಿಯಲ್ಲಿರುವವರೆಂದರೆ ಕಾಂಗ್ರೆಸ್‌ನ ಹಿಮಾಚಲ ಪ್ರದೇಶ ಮುಖ್ಯಸ್ಥೆ ಪ್ರತಿಭಾ ಸಿಂಗ್. ಇವರು ಕಳೆದ ವರ್ಷ ಮೃತರಾದ ಹಿಮಾಚಲ ಕಾಂಗ್ರೆಸ್‌ನ ಅತಿ ಉನ್ನತ ನಾಯಕರಾಗಿದ್ದ ವೀರಭದ್ರ ಸಿಂಗ್ ಅವರ ಪತ್ನಿ.  ಪ್ರತಿಭಾ ಸಿಂಗ್ ಮಂಡಿಯಿಂದ ಲೋಕಸಭಾ ಸಂಸದರಾದವರು ಮತ್ತು  ರಾಜಮನೆತನಕ್ಕೆ ಸೇರಿದವರು. ಅವರು ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ ಆದರೆ ಕಾಂಗ್ರೆಸ್ ಪ್ರಚಾರವನ್ನು ಸಮರ್ಥವಾಗಿ ಮುನ್ನಡೆಸಿದ್ದಾರೆ

ಅವರ ಹೊರತಾಗಿ ಇನ್ನೂ ಮೂವರು ಸ್ಪರ್ಧಿಗಳಿದ್ದಾರೆ – ಮಾಜಿ ರಾಜ್ಯ ಮುಖ್ಯಸ್ಥ ಸುಖವಿಂದರ್ ಸಿಂಗ್ ಸುಖು, ಪ್ರಸ್ತುತ ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಮುಖೇಶ್ ಅಗ್ನಿಹೋತ್ರಿ ಮತ್ತು ಹರ್ಷವರ್ಧನ್ ಚೌಹಾಣ್.

ಯಾವುದೇ ಭಿನ್ನಮತವಿಲ್ಲದೆ ಅಭ್ಯರ್ಥಿಗಳ ಆಯ್ಕೆ ಕಾಂಗ್ರೆಸ್‌ ಪಕ್ಷಕ್ಕೆ ದೊಡ್ಡ ತಲೆನೋವಾಗಿದೆ.”ಆಪರೇಷನ್ ಕಮಲ” ನಡೆಯಬಹುದು ಎಂಬ ಆತಂಕವೂ ಕಾಂಗ್ರೆಸ್‌ಗೆ ಇದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top