News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪ್ರತಿ ಡಿ.11 ರಂದು ‘ಭಾರತೀಯ ಭಾಷಾ ಉತ್ಸವ’ ಆಚರಿಸುವಂತೆ ಯುಜಿಸಿ ಕರೆ

ನವದೆಹಲಿ: ವಿಶ್ವವಿದ್ಯಾನಿಲಯ ಅನುದಾನ ಆಯೋಗ (UGC)ವು ದೇಶದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪ್ರತಿ 11 ಡಿಸೆಂಬರ್ ಅನ್ನು ‘ಭಾರತೀಯ ಭಾಷಾ ಉತ್ಸವ’ ಎಂದು ಆಚರಿಸಲು ಪತ್ರ ಬರೆದಿದೆ.

11 ಡಿಸೆಂಬರ್ ತಮಿಳು ಕವಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಮಹಾಕವಿ ಸುಬ್ರಮಣ್ಯ ಭಾರತಿ ಅವರ ಜನ್ಮದಿನವಾಗಿದೆ. ಭಾರತಿ ಬಹುಭಾಷಾ ಪಂಡಿತ ಮತ್ತು ಕಾಶಿಯಲ್ಲಿದ್ದಾಗ ಹಿಂದಿ ಮತ್ತು ಸಂಸ್ಕೃತವನ್ನು ಕಲಿತಿದ್ದರು.

ವಿದ್ಯಾರ್ಥಿಗಳಲ್ಲಿ ಭಾಷಾ ಸೌಹಾರ್ದತೆ ಮತ್ತು ಜಾಗೃತಿಯನ್ನು ಉತ್ತೇಜಿಸಲು ಸಂಸ್ಥೆಗಳು ವಿವಿಧ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳನ್ನು ಆಯೋಜಿಸುವಂತೆ ಪತ್ರದಲ್ಲಿ ಸೂಚಿಸಲಾಗಿದೆ. ಇದು ಏಕ್ ಭಾರತ್ ಶ್ರೇಷ್ಠ ಭಾರತ್ ಮತ್ತು ಆಜಾದಿ ಕಾ ಅಮೃತ್ ಮಹೋತ್ಸವ ಉಪಕ್ರಮಗಳ ಅಡಿಯಲ್ಲಿ ನಡೆಯಲಿದೆ.

ವಿವಿಧ ರಾಜ್ಯಗಳು ಮತ್ತು ಪ್ರದೇಶಗಳ ಭಾಷೆಗಳಿಗೆ ಮೀಸಲಾದ ಪ್ರದರ್ಶನ ಮಳಿಗೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಜನಾಂಗೀಯ ಉಡುಗೆ ತೊಡುಗೆ, ರಸಪ್ರಶ್ನೆಗಳು, ಪ್ರಬಂಧ ಬರವಣಿಗೆ, ಭಾಷಣ, ‘ನನ್ನ ಭಾಷೆ, ನನ್ನ ಸಹಿ’, ಬಹುಭಾಷಾ ವಿದ್ಯಾರ್ಥಿಗಳಿಗೆ ಸನ್ಮಾನ, ಸ್ಥಳೀಯ ಭಾಷಾ ತಂತ್ರಾಂಶದ ಪ್ರಾತ್ಯಕ್ಷಿಕೆ ಇತ್ಯಾದಿಗಳನ್ನು ಆಯೋಜಿಸುವಂತೆ ಶೈಕ್ಷಣಿಕ ಸಂಸ್ಥೆಗಳಿಗೆ ಯುಜಿಸಿ ಮುಂದಿಟ್ಟಿರುವ ಪ್ರಸ್ತಾವನೆಗಳು.

ಒಂದು ತಿಂಗಳ ಕಾಲ ಕಾಶಿ ತಮಿಳು ಸಂಗಮಂ ಮೂಲಕ ತಮಿಳುನಾಡು ಮತ್ತು ಕಾಶಿ ನಡುವಿನ ಪ್ರಾಚೀನ ಸಾಂಸ್ಕೃತಿಕ ಸಂಬಂಧಗಳನ್ನು ದೇಶವು ಮರುಶೋಧಿಸಿದ ಸಂದರ್ಭದಲ್ಲಿ ಈ ಉಪಕ್ರಮ ನಡೆಯಲಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top