News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಏಕರೂಪ ನಾಗರಿಕ ಸಂಹಿತೆ ಬಗೆಗಿನ ಖಾಸಗಿ ಸದಸ್ಯ ಮಸೂದೆ ಮಂಡನೆ

ನವದೆಹಲಿ: ಏಕರೂಪ ನಾಗರಿಕ ಸಂಹಿತೆ ಸಿದ್ಧಪಡಿಸಲು ಸಮಿತಿಗೆ ಅವಕಾಶ ಕಲ್ಪಿಸುವ ಖಾಸಗಿ ಸದಸ್ಯರ ಮಸೂದೆಯನ್ನು ಇಂದು ರಾಜ್ಯಸಭೆಯಲ್ಲಿ ಮಂಡಿಸಲಾಯಿತು.

ವಿಧೇಯಕ ಮಂಡನೆ ಬಳಿಕ ಮೇಲ್ಮನೆಯಲ್ಲಿ ಗದ್ದಲ ಆರಂಭಗೊಂಡಿದೆ. ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ), ತೃಣಮೂಲ ಕಾಂಗ್ರೆಸ್‌ನ ವಿರೋಧ ಪಕ್ಷದ ಸದಸ್ಯರು ಮಸೂದೆಯನ್ನು ಮಂಡಿಸುವುದರ ವಿರುದ್ಧ ಪ್ರತಿಭಟಿಸಿದರು, ಇದು ದೇಶದಲ್ಲಿ ಪ್ರಚಲಿತದಲ್ಲಿರುವ ಸಾಮಾಜಿಕ ರಚನೆ ಮತ್ತು ವಿವಿಧತೆಯಲ್ಲಿ ಏಕತೆಯನ್ನು ನಾಶಗೊಳಿಸುತ್ತದೆ ಎಂದು ಹೇಳಿದರು.

ಪ್ರತಿಪಕ್ಷಗಳ ಸದಸ್ಯರು ಮಸೂದೆಯನ್ನು ಹಿಂಪಡೆಯಲು ಕೋರಿದಾಗ, ರಾಜ್ಯಸಭೆಯ ಅಧ್ಯಕ್ಷ ಜಗದೀಪ್ ಧನಖರ್ ಅವರು ಡಿವಿಜನ್‌ಗೆ ಕರೆ ನೀಡಿದರು ಮತ್ತು ಮಸೂದೆಯನ್ನು  ಮಂಡಿಸುವ ಪ್ರಸ್ತಾವನೆಯು  ಪರವಾಗಿ 63 ಮತ್ತು ವಿರುದ್ಧವಾಗಿ 23 ಮತಗಳೊಂದಿಗೆ ಅಂಗೀಕರಿಸಲ್ಪಟ್ಟಿತು.

ಈ ಹಿಂದೆ, ಮಸೂದೆಯನ್ನು ಪರಿಚಯಿಸಲು ಪಟ್ಟಿ ಮಾಡಲಾಗಿದ್ದರೂ, ಅದನ್ನು ಮೇಲ್ಮನೆಯಲ್ಲಿ ಮಂಡಿಸಲಾಗಿಲ್ಲ.

ಧರ್ಮವನ್ನು ಪರಿಗಣಿಸದೆ ಎಲ್ಲಾ ನಾಗರಿಕರ ವೈಯಕ್ತಿಕ ಹಕ್ಕುಗಳನ್ನು ರಕ್ಷಿಸಲು ಕಾನೂನುಗಳನ್ನು ಮಸೂದೆ ಕಲ್ಪಿಸುತ್ತದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top