News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಇಂದು ಗುಜರಾತ್ ಬಿಜೆಪಿ‌ ಶಾಸಕಾಂಗ ಪಕ್ಷದ ಸಭೆ: ಸಿಎಂ ಆಯ್ಕೆ

ನವದೆಹಲಿ: ಗುಜರಾತ್‌ನಲ್ಲಿ ನೂತನವಾಗಿ ಆಯ್ಕೆಯಾದ ಬಿಜೆಪಿ ಶಾಸಕರು ಇಂದು ಗಾಂಧಿನಗರದಲ್ಲಿರುವ ರಾಜ್ಯ ಪಕ್ಷದ ಪ್ರಧಾನ ಕಛೇರಿ ಶ್ರೀ ಕಮಲಂನಲ್ಲಿ ಸಭೆ ಸೇರಿ ಶಾಸಕಾಂಗ ಪಕ್ಷದ ನಾಯಕರನ್ನು ಆಯ್ಕೆ ಮಾಡಲಿದ್ದಾರೆ.

ವೀಕ್ಷಕರಾಗಿ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ಅರ್ಜುನ್ ಮುಂಡಾ ಮತ್ತು ಪಕ್ಷದ ಹಿರಿಯ ನಾಯಕ  ಬಿ.ಎಸ್. ಯಡಿಯೂರಪ್ಪ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಭೆಯಲ್ಲಿ ಪಾಲ್ಗೊಳ್ಳಲು ಹೊಸದಾಗಿ ಆಯ್ಕೆಯಾದ ಪಕ್ಷದ ಎಲ್ಲಾ ಶಾಸಕರು ಈಗಾಗಲೇ ಅಹಮದಾಬಾದ್ ತಲುಪಿದ್ದಾರೆ.

182 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ ದಾಖಲೆಯ 156 ಸ್ಥಾನಗಳನ್ನು ಗಳಿಸಿದ್ದರೆ, ಕಾಂಗ್ರೆಸ್ 17 ಸ್ಥಾನಗಳನ್ನು ಗೆದ್ದುಕೊಂಡಿದೆ. ಐದು ಸ್ಥಾನಗಳು ಆಮ್ ಆದ್ಮಿ ಪಕ್ಷಕ್ಕೆ ಬಂದಿವೆ.

ಸೋಮವಾರ ಗಾಂಧಿನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಎನ್‌ಡಿಎ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ವರದಿಗಳ ಪ್ರಕಾರ, ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಹೊಸ ಸರ್ಕಾರ ರಚನೆಗೆ ದಾರಿ ಮಾಡಿಕೊಡಲು 14 ನೇ ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ ಮತ್ತು ಏಕೈಕ ದೊಡ್ಡ ಪಕ್ಷವಾಗಿರುವ ಬಿಜೆಪಿ ಮುಂದಿನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ.

ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ರಾಜಭವನದಲ್ಲಿ ರಾಜ್ಯಪಾಲರಿಗೆ ತಮ್ಮ ಸಂಪೂರ್ಣ ಸಂಪುಟದೊಂದಿಗೆ ರಾಜೀನಾಮೆ ಪತ್ರವನ್ನು ನೀಡಿದರು. ಆದರೆ, ಮತ್ತೆ ಪಟೇಲ್‌ ಅವರು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top