ಬೆಂಗಳೂರು : ಬೆಂಗಳೂರಿನ ಕುಂಬಳಗೋಡಿನಲ್ಲಿಂದು ರುಡ್ ಸೆಟ್ ರಾಷ್ಟ್ರೀಯ ಅಕಾಡೆಮಿ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮಕ್ಕೆ ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಗಿರಿರಾಜ್ ಸಿಂಗ್ ಚಾಲನೆ ನೀಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗ್ಗಡೆ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ಶೈಲೇಶ್ ಕುಮಾರ್ ಸಿಂಗ್ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ಬಸವರಾಜ ಬೊಮ್ಮಾಯಿ, ಕೌಶಲ್ಯ ಭಾರತ ಯೋಜನೆಯಡಿ ಯುವಜನರಿಗೆ ಕೌಶಲ್ಯ ತರಬೇತಿ ನೀಡಿ ಉದ್ಯಮಶೀಲತೆ ವೃದ್ಧಿಸಲು ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ರಾಜ್ಯವು ಕೌಶಲ್ಯ ಹಾಗೂ ಮಾನವ ಸಂಪನ್ಮೂಲ ಕ್ಷೇತ್ರದಲ್ಲಿ ಅಗ್ರಗಣ್ಯವಾಗಿದ್ದು, ಬಂಡವಾಳ ಆಕರ್ಷಣೆಯಲ್ಲೂ ಗಮನ ಸೆಳೆದಿದೆ. ದೊಡ್ಡ ಮಟ್ಟದಲ್ಲಿ ಕೈಗಾರಿಕೆಗಳ ಸ್ಥಾಪನೆ, ನವೋದ್ಯಮಗಳಿಗೆ ಉತ್ತೇಜನ ನೀಡುವುದು ಸರ್ಕಾರದ ಪ್ರಥಮ ಪ್ರಾಶಸ್ತ್ಯವಾಗಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿ @BSBommai ಅವರು ಕೆಂಗೇರಿ ಹೋಬಳಿಯ ಕುಂಬಳಗೋಡು ಗ್ರಾಮದಲ್ಲಿ ರುಡ್ಸೆಟ್ ರಾಷ್ಟ್ರೀಯ ಅಕಾಡೆಮಿ ಹಾಗೂ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಪ್ರಯೋಜಕತ್ವದಲ್ಲಿ ಆಯೋಜಿಸಿರುವ “ರುಡ್ಸೆಟ್ ರಾಷ್ಟ್ರೀಯ ಅಕಾಡೆಮಿಯ ನೂತನ ಕಟ್ಟಡ”ದ ಉದ್ಘಾಟನೆ ನೆರವೇರಿಸಿದರು.
1/2 pic.twitter.com/1NyPZMfp8m— CM of Karnataka (@CMofKarnataka) December 10, 2022
ವಿವೇಕಾನಂದ ಯುವಶಕ್ತಿ ಯೋಜನೆಯಡಿ ರಾಜ್ಯದ ಗ್ರಾಮ ಮಟ್ಟದ ಯುವಜನ ಸಂಘಗಳಿಗೆ ಅನುದಾನ ಒದಗಿಸಲು ಸರ್ಕಾರ ಯೋಜನೆ ರೂಪಿಸಿದೆ. ಈ ಯೋಜನೆಯಡಿ 5 ಲಕ್ಷ ಯುವಕರಿಗೆ ಸ್ವಯಂ ಉದ್ಯೋಗ ನೀಡಲಾಗುವುದು. ಗ್ರಾಮೀಣ ಕುಶಲಕರ್ಮಿಗಳಿಗೆ ಸಹಾಯಧನ ಯೋಜನೆ ವಿಸ್ತರಿಸಲಾಗಿದ್ದು, ದುಡಿಯುವ ವರ್ಗಕ್ಕೆ ಸದಾ ಬೆಂಬಲ ನೀಡಲಾಗುತ್ತಿದೆ ಎಂದರು.
ಗ್ರಾಮೀಣ ಆರ್ಥಿಕತೆಗೆ ರಾಜ್ಯ ಸರ್ಕಾರ ಒತ್ತು ನೀಡಿದೆ. ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ಸೇರಿದಂತೆ ಗ್ರಾಮ ಮಟ್ಟದಲ್ಲಿ ಯುವಜನ ಸಂಘಟನೆ, ಮಹಿಳಾ ಸಂಘ ಸಂಸ್ಥೆಗಳ ಮೂಲಕ ಸಹಕಾರ ವಲಯಕ್ಕೆ ಉತ್ತೇಜನ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಗಿರಿರಾಜ್ ಸಿಂಗ್ ಅವರು, 44 ಲಕ್ಷಕ್ಕೂ ಹೆಚ್ಚು ಮಂದಿಗೆ ರುಡೆ ಸೆಟ್ ಸಂಸ್ಥೆ ಉದ್ಯೋಗ ನೀಡಿದ್ದು, ಇದು ಕರ್ಮಭೂಮಿಯಾಗಿದ್ದು, ಪ್ರಮುಖವಾಗಿ ಯುವಕರು ಸ್ವಾವಲಂಬಿಗಳಾಗಬೇಕು ಎಂದರು.
Addressed the audience at the inauguration ceremony of the New Building of National RUDSETI Academy in Bangalore today Hon’ble Chief Minister Shri @BSBommai , Kulaste ji was also present pic.twitter.com/FULOxTQ3fl
— Shandilya Giriraj Singh (@girirajsinghbjp) December 10, 2022
ಡಾ. ವೀರೇಂದ್ರ ಹೆಗಡೆ, ಉತ್ತರ ಭಾರತದಲ್ಲಿ ನಿರ್ಮಾಣ ಆಗಬೇಕಿದ್ದ ರುಡ್ ಸೆಟ್ ರಾಷ್ಟ್ರೀಯ ಅಕಾಡೆಮಿ ಬೆಂಗಳೂರಿನಲ್ಲಿನ ಉದ್ಘಾಟನೆ ಆಗಿರುವುದು ನಮ್ಮೆಲ್ಲರ ಹೆಮ್ಮೆಯ ಸಂಗತಿಯಾಗಿದ್ದು, ನಮ್ಮ ನಾಡಿನ ಜನರು ಇದರ ಸದುಪಯೋಗ ಪಡೆಯಬೇಕು. ಪ್ರತಿ ತಿಂಗಳಿಗೊಮ್ಮೆ ತರಬೇತಿ ಕಾರ್ಯಕ್ರಮ ನಡೆಯಲಿದ್ದು, ದೇಶದ ವಿವಿಧ ಭಾಗಗಳಿಂದ ಜನರು ಇಲ್ಲಿಗೆ ಆಗಮಿಸಲಿದ್ದಾರೆ. ರಾಜ್ಯದ ಯುವಜನತೆ ಇದನ್ನು ಬಳಸಿಕೊಂಡು ಸ್ವಾವಲಂಬಿಗಳಾಗಬೇಕು ಎಂದರು.
ಇದಕ್ಕೂ ಮುನ್ನ ನಿರುದ್ಯೋಗಿ ಯುವಕರಿಗೆ ಚೆಕ್ ವಿತರಣೆ ಮಾಡಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.