News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಗಣ್ಯರು, ಸಾಧುಗಳ ಸಮ್ಮುಖದಲ್ಲಿ ಭೂಪೇಂದ್ರ ಪಟೇಲ್‌ ಪ್ರಮಾಣವಚನ

ಗಾಂಧಿನಗರ: ಇಂದು ಗಾಂಧಿನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ಕೇಂದ್ರ ಸಚಿವರು ಭಾಗವಹಿಸಿದ್ದ ಅದ್ಧೂರಿ ಸಮಾರಂಭದಲ್ಲಿ ಗುಜರಾತ್ ಬಿಜೆಪಿ ನಾಯಕ ಭೂಪೇಂದ್ರ ಪಟೇಲ್ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯಪಾಲ ಆಚಾರ್ಯ ದೇವವ್ರತ್ ಅವರು ಗುಜರಾತಿನ 18 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಬೋಧಿಸಿದರು. ಬಿಜೆಪಿ ಆಡಳಿತವಿರುವ ರಾಜ್ಯಗಳು ಮತ್ತು ಮಿತ್ರಪಕ್ಷಗಳ ಮುಖ್ಯಮಂತ್ರಿಗಳು ಕೂಡ ಭವ್ಯ ಸಮಾರಂಭದಲ್ಲಿ ಭಾಗವಹಿಸಿದ್ದರು.

ಹದಿನಾರು ಸಚಿವರು ಕೂಡ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರಲ್ಲಿ ಹೆಚ್ಚಿನವರು  ಪಟೇಲ್ ಅವರ ಮೊದಲ ಅವಧಿಯ ಭಾಗವಾಗಿದ್ದವರು.

ಇಂದು ಪ್ರಮಾಣ ವಚನ ಸ್ವೀಕರಿಸಿದ ಬಿಜೆಪಿ ಶಾಸಕರೆಂದರೆ ಹರ್ಷ ಸಂಘವಿ, ಜಗದೀಶ್ ವಿಶ್ವಕರ್ಮ, ಪರಶೋತ್ತಮ್ ಸೋಲಂಕಿ, ಬಚುಭಾಯಿ ಖಬದ್, ಮುಖೇಶ್ ಪಟೇಲ್, ಪ್ರಫುಲ್ ಪನ್ಶೇರಿಯಾ, ಭಿಖುಸಿನ್ಹ ಪರ್ಮಾರ್ ಮತ್ತು ಕುನ್ವರ್ಜಿ ಹಲ್ಪಾಟಿ.

ಸಮಾರಂಭದಲ್ಲಿ ರಾಜ್ಯದ 200 ಸಾಧುಗಳು ಭಾಗವಹಿಸಿದ್ದರು, ಅವರನ್ನು ಸಮಾರಂಭಕ್ಕೆ ವಿಶೇಷವಾಗಿ ಆಹ್ವಾನಿಸಲಾಗಿತ್ತು. ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿಗಳು ಮತ್ತು ಪಂಗಡಗಳು ಮತ್ತು ಮಹಿಳೆಯರು ಕೂಡ ಭಾಗಿಯಾಗಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top