News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸಂಸತ್ತು ದಾಳಿಗೆ 21 ವರ್ಷ: ಹುತಾತ್ಮರಿಗೆ ರಾಷ್ಟ್ರದ ನಮನ

ನವದೆಹಲಿ: 2001ರ ಡಿಸೆಂಬರ್ 13ರಂದು ದೇಶದ ಶಕ್ತಿ ಕೇಂದ್ರ ಸಂಸತ್ತಿನ ಮೇಲೆ ಭಯೋತ್ಪಾದನಾ ದಾಳಿ ನಡೆದಿತ್ತು. ಈ ಕರಾಳ ದಿನಕ್ಕೆ 21 ವರ್ಷಗಳು ತುಂಬಿದ್ದು,  ದೇಶವಿಂದು ಹುತಾತ್ಮರನ್ನು ನೆನಪಿಸಿಕೊಳ್ಳುತ್ತಿದೆ.

ಭೀಕರ ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ ಸಂಸತ್ತಿನ ರಕ್ಷಣೆಗೆ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ವೀರಯೋಧರಿಗೆ ರಾಷ್ಟ್ರ ನಮನ ಸಲ್ಲಿಸುತ್ತಿದೆ. ಸಂಸತ್ ಭವನದ ಆವರಣದಲ್ಲಿ ಇಂದು ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಗಣ್ಯರು ಹುತಾತ್ಮ ಯೋಧರಿಗೆ ಪುಷ್ಪ ನಮನ ಸಲ್ಲಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು 2001 ರಲ್ಲಿ ಭಯೋತ್ಪಾದಕ ದಾಳಿಯ ವೇಳೆ ಸಂಸತ್ತಿನ ರಕ್ಷಣೆಗಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಟ್ವೀಟ್‌ ಮಾಡಿರುವ ಅವರು, 2001 ರಲ್ಲಿ ಈ ದಿನ ಭಯೋತ್ಪಾದಕ ದಾಳಿಯ ವಿರುದ್ಧ ಸಂಸತ್ತಿನ ರಕ್ಷಣೆಗಾಗಿ  ತಮ್ಮ ಪ್ರಾಣವನ್ನು ಅರ್ಪಿಸಿದ ವೀರ ಹುತಾತ್ಮರಿಗೆ ರಾಷ್ಟ್ರವು ಗೌರವ ಸಲ್ಲಿಸುತ್ತದೆ. ಅವರ ಧೈರ್ಯ ಮತ್ತು ಅತ್ಯುನ್ನತ ತ್ಯಾಗಕ್ಕಾಗಿ ರಾಷ್ಟ್ರವು ಸದಾ ತನ್ನ ವೀರರಿಗೆ ಕೃತಜ್ಞರಾಗಿರಲಿದೆ ಎಂದು ಅವರು ಹೇಳಿದ್ದಾರೆ.

ಸಂಸತ್ತಿನ ದಾಳಿಯಲ್ಲಿ 6 ದೆಹಲಿ ಪೊಲೀಸ್ ಸಿಬ್ಬಂದಿ, 2 ಸಂಸತ್ತಿನ ಭದ್ರತಾ ಸಿಬ್ಬಂದಿ ಮತ್ತು ಒಬ್ಬ ಗಾರ್ಡನ್‌ ನೋಡಿಕೊಳ್ಳುವ ಸಿಬ್ಬಂದಿ ಸೇರಿದಂತೆ ಒಟ್ಟು 9 ಜನರು ಸಾವನ್ನಪ್ಪಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧವನ್ನು ಹದಗೆಡಿಸಿದ್ದಾರೆ.

 ಸಂಸತ್ತಿನ ಮೇಲೆ ಎರಡು ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪುಗಳಾದ ಲಷ್ಕರ್-ಎ-ತೊಯ್ಬಾ ಮತ್ತು ಜೈಶ್-ಎ-ಮೊಹಮ್ಮದ್ ಜಂಟಿಯಾಗಿ ಈ ದಾಳಿಯನ್ನು ನಡೆಸಿತ್ತು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top