News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಯಾರಿಗೂ ಭಾರತದ ಒಂದಿಂಚು ಭೂಮಿ ವಶಪಡಿಸಿಕೊಳ್ಳಲು ಸಾಧ್ಯವಿಲ್ಲ: ಅಮಿತ್‌ ಶಾ

ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಅಧಿಕಾರದಲ್ಲಿ ಇರುವವರೆಗೆ ಯಾರೂ ಒಂದು ಇಂಚು ಭೂಮಿಯನ್ನು ವಶಪಡಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ.

ಇಂದು ಅರುಣಾಚಲ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಪಡೆಗಳ ನಡುವಿನ ಘರ್ಷಣೆಯ ಬಗ್ಗೆ ಚರ್ಚೆಗೆ ಪ್ರತಿಪಕ್ಷಗಳು ಒತ್ತಾಯಿಸಿದ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

ಸಂಸತ್ ಭವನದ ಹೊರಗೆ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ರಾಜೀವ್ ಗಾಂಧಿ ಫೌಂಡೇಶನ್‌ನ ಎಫ್‌ಸಿಆರ್‌ಎ (ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆ) ರದ್ದತಿ ಕುರಿತು ಪ್ರಶ್ನೆಗಳನ್ನು ತಪ್ಪಿಸಲು ಸಂಸತ್ತಿನಲ್ಲಿ ಕಾಂಗ್ರೆಸ್ ಗಡಿ ವಿಷಯವನ್ನು ಪ್ರಸ್ತಾಪಿಸಿದೆ ಎಂದು ಹೇಳಿದರು.

ರಾಜೀವ್ ಗಾಂಧಿ ಫೌಂಡೇಶನ್ (RGF), ಚೀನಾ ರಾಯಭಾರ ಕಚೇರಿಯಿಂದ ರೂಪಾಯಿ 1.35 ಕೋಟಿ ಪಡೆದಿದೆ ಎಂದು ಅವರು ಆರೋಪಿಸಿದ್ದಾರೆ. ಇದು ಎಫ್‌ಸಿಆರ್‌ಎ ನಿಯಮಗಳಿಗೆ ಅನುಸಾರವಾಗಿಲ್ಲದ ಕಾರಣ ಅದರ ನೋಂದಣಿಯನ್ನು ರದ್ದುಗೊಳಿಸಲಾಗಿದೆ ಎಂದು ಅವರು ಹೇಳಿದರು.

ನೆಹರೂ ಅವರ ಚೀನಾದ ಮೇಲಿನ ಪ್ರೀತಿಯಿಂದಾಗಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತದ ಖಾಯಂ ಸ್ಥಾನವನ್ನು ತ್ಯಾಗ ಮಾಡಲಾಗಿದೆ ಎಂದು ಶಾ ಹೇಳಿದರು.

ಭಾರತೀಯ ಸೈನಿಕರ ಶೌರ್ಯವನ್ನು ಶ್ಲಾಘಿಸಿದ ಅವರು, ನಾನು ಸ್ಪಷ್ಟವಾಗಿ ಹೇಳಬಯಸುತ್ತೇನೆ. ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಅಧಿಕಾರದಲ್ಲಿ ಇರುವವರೆಗೂ ನಮ್ಮ ಒಂದು ಇಂಚು ಭೂಮಿಯನ್ನು ಯಾರೂ ವಶಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top