News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

2014-22ರವರೆಗೆ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ 6.22 ಲಕ್ಷ ಕೋಟಿ ರೂ ಒದಗಿಸಲಾಗಿದೆ

ನವದೆಹಲಿ: 2014-22ರಲ್ಲಿ ಕೃಷಿ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಸುಮಾರು 6.22 ಲಕ್ಷ ಕೋಟಿ ರೂಪಾಯಿ ಒದಗಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರು ಹೇಳಿದ್ದಾರೆ.

ಕೃಷಿ ಕ್ಷೇತ್ರದ ಬೆಳವಣಿಗೆಗೆ ಮತ್ತು ರೈತರ ಆದಾಯವನ್ನು ಹೆಚ್ಚಿಸಲು ಕೇಂದ್ರವು ಹಲವಾರು ಕ್ರಮಗಳನ್ನು ಕೈಗೊಂಡಿದೆ ಎಂದ ಅವರು,  2006-14ರ ಅವಧಿಯಲ್ಲಿ ಕೃಷಿ ಬಜೆಟ್‌ 1,48,162.16 ಕೋಟಿ ರೂ.ಗಳಷ್ಟಿದ್ದರೆ, 2014-22ರಲ್ಲಿ ಕೃಷಿ ವಲಯಕ್ಕೆ 6,21,940.92 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ.

ಪಿಎಂ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ, ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ಕೇಂದ್ರವು 2.16 ಲಕ್ಷ ಕೋಟಿ ರೂಪಾಯಿಗಳನ್ನು ನೇರವಾಗಿ ಒದಗಿಸಿದೆ. ಕೇಂದ್ರವು ಈ ಯೋಜನೆಯಡಿ ಮೂರು ಸಮಾನ ಕಂತುಗಳಲ್ಲಿ ವರ್ಷಕ್ಕೆ 6,000 ರೂ ನೀಡುತ್ತಿದೆ ಎಂದಿದ್ದಾರೆ.

ಆಧುನಿಕ ಡಿಜಿಟಲ್ ತಂತ್ರಜ್ಞಾನವನ್ನು ನೀಡುವ ಮೂಲಕ ಪ್ರಧಾನ ಮಂತ್ರಿಗಳು ರೈತರನ್ನು ಸಬಲೀಕರಣಗೊಳಿಸಿದ್ದಾರೆ ಎಂದು ಸಚಿವರು ಹೇಳಿದರು.

ಡಿಜಿಟಲ್ ತಂತ್ರಜ್ಞಾನದ ಮೂಲಕ ರೈತರನ್ನು ಭ್ರಷ್ಟಾಚಾರ ಮತ್ತು ಮಧ್ಯವರ್ತಿಗಳ ಸಮಸ್ಯೆಗಳಿಂದ ಮುಕ್ತಿಗೊಳಿಸುವುದರೊಂದಿಗೆ ಅನೇಕ ತೊಂದರೆಗಳು ಮತ್ತು ಲೂಟಿಗಳಿಂದ ರಕ್ಷಿಸಲಾಗಿದೆ ಎಂದು ಅವರು ಹೇಳಿದರು.

”ಡಿಜಿಟಲ್ ತಂತ್ರಗಳ ಮೂಲಕ ಸರಕಾರ ರೈತರಿಗೆ ನೀಡುವ ನೆರವು ಇದೀಗ ನೇರವಾಗಿ ರೈತರಿಗೆ ತಲುಪಲು ಆರಂಭಿಸಿದ್ದು, ಇದರಿಂದಾಗಿ ವ್ಯಾಪಾರ ಮಾಡಲು ಹೊಸ ಅವಕಾಶಗಳನ್ನು ಕಲ್ಪಿಸಲಾಗಿದೆ. ಬೀಜದಿಂದ ಮಾರುಕಟ್ಟೆಗೆ ಹೊಸ ಪರಿಕಲ್ಪನೆ ಮತ್ತು ಡಿಜಿಟಲ್ ಕೃಷಿ ಮಿಷನ್ ರೈತರ ಪರಿಸ್ಥಿತಿಗಳು ಮತ್ತು ಜೀವನಮಟ್ಟದಲ್ಲಿ ಬದಲಾವಣೆಗಳನ್ನು ತರುವಲ್ಲಿ ಪ್ರಮುಖ ಪಾತ್ರ ವಹಿಸಿದೆ” ಎಂದು ಅವರು ಹೇಳಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top