ನವದೆಹಲಿ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯತಿಥಿಯಾದ ಇಂದು ಪ್ರಧಾನಿ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ರಾಷ್ಟ್ರವನ್ನು ಒಗ್ಗೂಡಿಸುವಲ್ಲಿ ಮತ್ತು ಸರ್ವತೋಮುಖ ಅಭಿವೃದ್ಧಿಗೆ ಉತ್ತೇಜನ ನೀಡುವಲ್ಲಿ ಭಾರತಕ್ಕೆ ಸರ್ದಾರ್ ಪಟೇಲ್ ಅವರ ಕೊಡುಗೆಯನ್ನು ಪ್ರಧಾನಿ ಸ್ಮರಿಸಿದ್ದಾರೆ.
ಗೃಹ ಸಚಿವ ಅಮಿತ್ ಶಾ ಅವರು ಕೂಡ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯತಿಥಿಯ ಸಂದರ್ಭದಲ್ಲಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಪಟೇಲ್ ಅವರ ದೃಢವಾದ ಇಚ್ಛಾಶಕ್ತಿ ಮತ್ತು ನಾಯಕತ್ವದ ಸಾಮರ್ಥ್ಯದಿಂದಾಗಿ ದೇಶವು ಅವರನ್ನು ಸರ್ದಾರ್ ಎಂದು ನೆನಪಿಸಿಕೊಳ್ಳುತ್ತದೆ ಎಂದು ಶಾ ಹೇಳಿದರು.
ತಮ್ಮ ಕಲ್ಪನೆಯನ್ನು ವಾಸ್ತವಕ್ಕೆ ತಿರುಗಿಸಲು ಶ್ರಮಿಸಿದ ಸರ್ದಾರ್ ಪಟೇಲ್ ಅವರನ್ನು ಕರ್ಮಯೋಗಿ ಎಂದು ಶಾ ಕರೆದಿದ್ದಾರೆ.
ಸರ್ದಾರ್ ಪಟೇಲ್ ಅವರಿಗೆ ಗೌರವ ಸಲ್ಲಿಸಿದ ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ಅವರು ದೂರದೃಷ್ಟಿಯ ನಾಯಕ, ಬದ್ಧ ಸಮಾಜ ಸುಧಾರಕ ಮತ್ತು ಸಮರ್ಪಿತ ರಾಷ್ಟ್ರೀಯತಾವಾದಿಯಾಗಿ ಅವರ ಪರಂಪರೆಯನ್ನು ಎಂದಿಗೂ ಮರೆಯಲಾಗುವುದಿಲ್ಲ ಎಂದು ಹೇಳಿದ್ದಾರೆ.
I pay homage to Sardar Patel on his Punya Tithi and recall his everlasting contribution to India, especially in uniting our nation and giving impetus to all-round development.
— Narendra Modi (@narendramodi) December 15, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.