News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳ: ಕಾಶ್ಮೀರ ಏರ್‌ಪೋರ್ಟ್‌ ವಿಸ್ತರಣೆಗೆ ಕೇಂದ್ರ ಯೋಜನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬದ್ಧವಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ.

ಲೋಕಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಪ್ರಶ್ನೆಗಳಿಗೆ ಉತ್ತರಿಸಿದ ಸಿಂಧಿಯಾ, ಅಂತಾರಾಷ್ಟ್ರೀಯ ಪ್ರವಾಸಿಗರು ಸೇರಿದಂತೆ ಈ ವರ್ಷ ದಾಖಲೆ ಸಂಖ್ಯೆಯ ಪ್ರವಾಸಿಗರು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಹೆಚ್ಚಿನ ಪ್ರವಾಸಿಗರ ಭೇಟಿಯಿಂದ ಉಂಟಾಗುವ ಬೇಡಿಕೆಗಳನ್ನು ಪೂರೈಸಲು ಶ್ರೀನಗರ ವಿಮಾನ ನಿಲ್ದಾಣದ ಟರ್ಮಿನಲ್ ಅನ್ನು ವಿಸ್ತರಿಸಲಾಗುವುದು. ಜಮ್ಮು ವಿಮಾನ ನಿಲ್ದಾಣದ ವಿಸ್ತರಣೆ ಯೋಜನೆಯನ್ನು ಸರ್ಕಾರ ಹೊಂದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ನವೆಂಬರ್ 2021 ರಲ್ಲಿ, ಜಮ್ಮು ಮತ್ತು ಕಾಶ್ಮೀರ ಆಡಳಿತವು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಅತ್ಯಾಧುನಿಕ 25,000 ಚದರ ಮೀಟರ್‌ನ ಹೊಸ ಟರ್ಮಿನಲ್ ಕಟ್ಟಡವನ್ನು ನಿರ್ಮಿಸಲು 122 ಎಕರೆ ಭೂಮಿಯನ್ನು ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (AAI) ಗೆ ಹಸ್ತಾಂತರಿಸುವುದಾಗಿ ಹೇಳಿತ್ತು ಮತ್ತು  ಭೂಮಿಯನ್ನು ಈಗಾಗಲೇ ಗುರುತಿಸಲಾಗಿತು ಶೀಘ್ರವೇ ಹಸ್ತಾಂತ ನಡೆಯುವ ನಿರೀಕ್ಷೆ ಇದೆ.

ಪ್ರವಾಸೋದ್ಯಮವು ಜಮ್ಮು ಮತ್ತು ಕಾಶ್ಮೀರದಲ್ಲಿ ಉದ್ಯೋಗದ ದೊಡ್ಡ ಮೂಲವಾಗಿದೆ ಮತ್ತು ಜನವರಿ, 2022 ರಿಂದ ಇಲ್ಲಿಯವರೆಗೆ, 1.62 ಕೋಟಿಗೂ ಹೆಚ್ಚು ಪ್ರವಾಸಿಗರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ, ಇದು ಸ್ವಾತಂತ್ರ್ಯದ 75 ವರ್ಷಗಳ ಬಳಿಕದ ಅತ್ಯಧಿಕವಾಗಿದೆ ಎಂದು ವರದಿಗಳು ತಿಳಿಸಿವೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top