News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನೀರವ್‌ ಮೋದಿ ಅರ್ಜಿ ಯುಕೆ ಕೋರ್ಟ್‌ನಲ್ಲಿ ವಜಾ:‌ ಭಾರತಕ್ಕೆ ಹಸ್ತಾಂತರ ಖಚಿತ

ಲಂಡನ್: ದೇಶದಿಂದ ಪರಾರಿಯಾಗಿರುವ ಬಹುಕೋಟಿ ವಂಚಕ ನೀರವ್‌ ಮೋದಿ ಅವರಿಗೆ ಮತ್ತೊಂದು ಹಿನ್ನೆಡೆಯಾಗಿದೆ. ಭಾರತಕ್ಕೆ ಹಸ್ತಾಂತರದ ವಿರುದ್ಧ ನೀರವ್ ಮೋದಿ ಸಲ್ಲಿಸಿದ್ದ ಮೇಲ್ಮನವಿಯನ್ನು ಬ್ರಿಟನ್  ಕೋರ್ಟ್ ತಿರಸ್ಕರಿಸಿದೆ. ಅಲ್ಲದೇ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಅವಕಾಶ ಕೈತಪ್ಪಿದೆ.

ಲಂಡನ್‌ನಲ್ಲಿರುವ ರಾಯಲ್ ಕೋರ್ಟ್ ಆಫ್ ಜಸ್ಟಿಸ್‌ನಲ್ಲಿ ನ್ಯಾಯಮೂರ್ತಿ ಜೆರೆಮಿ ಸ್ಟುವರ್ಟ್-ಸ್ಮಿತ್ ಮತ್ತು ನ್ಯಾಯಮೂರ್ತಿ ರಾಬರ್ಟ್ ಜೇ ಅವರ ನ್ಯಾಯಪೀಠ  ನೀರವ್ ಮೋದಿ ಅರ್ಜಿಯನ್ನು ವಜಾಗೊಳಿಸಿದೆ.

ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಭಾರತದಲ್ಲಿ ವಿಚಾರಣೆಗೆ ಹಾಜರಾಗುವುದರಿಂದ ತಪ್ಪಿಸುವ ಸಲುವಾಗಿ ವಜ್ರದ ವ್ಯಾಪಾರಿ ನೀರವ್ ಮೋದಿ ತಮ್ಮ ಹಸ್ತಾಂತರದ ವಿರುದ್ಧದ ಕಾನೂನು ಹೋರಾಟ ನಡೆಸಿದ್ದರು, ಆದರೀಗ ಅವರ ಕಾನೂನು ಹೋರಾಟ ಸೋಲಿನೊಂದಿಗೆ ಅಂತ್ಯಗೊಂಡಿದೆ. ಇನ್ನು ಮೇಲ್ಮನವಿಗೆ ಅವರಿಗೆ ಅವಕಾಶ ಇಲ್ಲ.

2018ರಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ನೀರವ್ ಮೋದಿ ಭಾರತದಿಂದ ಪರಾರಿಯಾಗಿದ್ದರು. ಅವರನ್ನು ಹಸ್ತಾಂತರಿಸಿದರೆ ಆತ್ಮಹತ್ಯೆ ಮಾಡಿಕೊಳ್ಳಬಹುದು ಎಂದು ಅವರ ಪರ ವಕೀಲರು ವಾದಿಸಿದ್ದಾರೆ. ನೀರವ್ ಮೋದಿ ಸದ್ಯ ಲಂಡನ್‌ನ ವಾಂಡ್ಸ್‌ವರ್ತ್ ಜೈಲಿನಲ್ಲಿದ್ದಾರೆ. ಶೀಘ್ರದಲ್ಲೇ ಅವರನ್ನು ಭಾರತಕ್ಕೆ ಹಸ್ತಾಂತರ ಮಾಡುವ ನಿರೀಕ್ಷೆ ಇದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top