News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಇಂದು ʼವಿಜಯ್‌ ದಿವಸ್‌ʼ :1971ರ ಯುದ್ಧದಲ್ಲಿ ಪಾಕ್ ವಿರುದ್ಧ ವಿಜಯದ ಸ್ಮರಣೆ

ನವದೆಹಲಿ: 1971 ರ ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತವು ವಿಜಯ ಸಾಧಿಸಿದ ಸ್ಮರಣಾರ್ಥ ರಾಷ್ಟ್ರವು ಇಂದು ವಿಜಯ್ ದಿವಸ್ ಅನ್ನು ಆಚರಿಸುತ್ತಿದೆ.

ಈ ದಿನದಂದು ವೀರಯೋಧರ ತ್ಯಾಗವನ್ನು ಸ್ಮರಿಸಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತಿದೆ. ಡಿಸೆಂಬರ್ 16, 1971 ರಂದು, ಪಾಕಿಸ್ತಾನಿ ಪಡೆಗಳ ಮುಖ್ಯಸ್ಥ ಜನರಲ್ ಅಮೀರ್ ಅಬ್ದುಲ್ಲಾ ಖಾನ್ ನಿಯಾಜಿ ಯುದ್ಧದ ಸೋಲಿನ ಬಳಿಕ 93 ಸಾವಿರ ಸೈನಿಕರೊಂದಿಗೆ ಢಾಕಾದಲ್ಲಿ ಲೆಫ್ಟಿನೆಂಟ್ ಜನರಲ್ ಜಗಜಿತ್ ಸಿಂಗ್ ಅರೋರಾ ನೇತೃತ್ವದ ಮಿತ್ರ ಪಡೆಗಳಿಗೆ ಬೇಷರತ್ತಾಗಿ ಶರಣಾದರು. ಯುದ್ಧದ ಅಂತ್ಯವು ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕೆ ಕಾರಣವಾಯಿತು.

ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರು ವಿಜಯ್ ದಿವಸ್‌ನ ಮುನ್ನಾದಿನದಂದು ಆರ್ಮಿ ಹೌಸ್‌ನಲ್ಲಿ ಅಟ್ ಹೋಮ್ ಔತಣಕೂಟದಲ್ಲಿ ಭಾಗವಹಿಸಿದ್ದರು.

1971ರ ಯುದ್ಧದಲ್ಲಿ ಗೆಲುವಿಗೆ ಕಾರಣರಾದ ನಮ್ಮ ಸಶಸ್ತ್ರ ಪಡೆಗಳ ಶೌರ್ಯವನ್ನು ಭಾರತ ಎಂದಿಗೂ ಮರೆಯುವುದಿಲ್ಲ ಎಂದು ಪ್ರಧಾನಿ ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top