News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಒಂದು ತಿಂಗಳ ‘ಕಾಶಿ-ತಮಿಳು ಸಂಗಮಂ’ ಇಂದು ಮುಕ್ತಾಯ

ವಾರಣಾಸಿ: ಉತ್ತರ ಪ್ರದೇಶದ ವಾರಣಾಸಿಯಲ್ಲಿ ಒಂದು ತಿಂಗಳ ಕಾಲ ನಡೆದ ಕಾಶಿ ತಮಿಳು ಸಂಗಮಂ ಇಂದು ಮುಕ್ತಾಯಗೊಳ್ಳಲಿದೆ. ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಅಲ್ಲದೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ, ಕೇಂದ್ರ ಶಿಕ್ಷಣ ಸಚಿವ ಡಾ.ಧರ್ಮೇಂದ್ರ ಪ್ರಧಾನ್, ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಜಿ.ಕಿಶನ್ ರೆಡ್ಡಿ, ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ.ಎಲ್.ಮುರುಗನ್ ಅವರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವರದಿಗಳು ತಿಳಿಸಿವೆ.

ಭಾರತದ ಎರಡು ಪುರಾತನ ಸಂಸ್ಕೃತಿಗಳಾದ ಕಾಶಿ ಮತ್ತು ತಮಿಳುನಾಡು ನಡುವಿನ ಹಳೆಯ ಸಂಬಂಧಕ್ಕೆ ಉತ್ತೇಜನ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ತಿಂಗಳ 19 ರಂದು ಕಾಶಿ ತಮಿಳು ಸಂಗಮವನ್ನು ಉದ್ಘಾಟಿಸಿದರು. ಕಳೆದ ಒಂದು ತಿಂಗಳ ಅವಧಿಯಲ್ಲಿ, ತಮಿಳುನಾಡಿನಿಂದ ಸುಮಾರು 2,500 ಜನರು ಕಾಶಿಗೆ ಭೇಟಿ ನೀಡಿದ್ದಾರೆ ಮತ್ತು ಕಾಶಿಯ ಕಲೆ ಮತ್ತು ಸಂಸ್ಕೃತಿ, ಸಂಪ್ರದಾಯಗಳು, ಜೀವನಶೈಲಿ, ಮತ್ತು ಕಾಶಿಯ ಭಾಷೆಯ ಬಗ್ಗೆ ತಿಳಿದುಕೊಂಡಿದ್ದಾರೆ

ಕಾಶಿ ತಮಿಳು ಸಂಗಮಂ ಆಚರಣೆಯ ಸಂದರ್ಭದಲ್ಲಿ, ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಒಂದು ತಿಂಗಳ ಅವಧಿಯಲ್ಲಿ ಪ್ರತಿದಿನ ಸಂಜೆ ಸಾಂಸ್ಕೃತಿಕ ಪ್ರದರ್ಶನವನ್ನು ನಡೆಸಲಾಗಿದೆ, ಇದರಲ್ಲಿ ತಮಿಳುನಾಡು ಮತ್ತು ಉತ್ತರ ಪ್ರದೇಶದ ಕಲಾವಿದರು ತಮ್ಮ ಕಲೆ ಮತ್ತು ಸಂಸ್ಕೃತಿ, ಸಂಗೀತ ಮತ್ತು ಜಾನಪದ ನೃತ್ಯಗಳನ್ನು ಪ್ರದರ್ಶಿಸಿದರು. ವಿಶ್ವವಿದ್ಯಾನಿಲಯದ ಅಂಫಿಥಿಯೇಟರ್ ಮೈದಾನದಲ್ಲಿ ಭವ್ಯವಾದ ವೇದಿಕೆಯನ್ನು ಸಹ ಹಾಕಲಾಗಿತ್ತು. ಕಾಶಿ ತಮಿಳು ಸಂಗಮದ ಹಲವಾರು ಕಾರ್ಯಕ್ರಮಗಳನ್ನು ಇಲ್ಲಿ ಆಯೋಜಿಸಲಾಗಿತ್ತು. ಕ್ರೀಡೆ, ಚಲನಚಿತ್ರಗಳು, ಕೈಮಗ್ಗ ಮತ್ತು ಕರಕುಶಲ ಮುಂತಾದ ಇತರ ವಿಭಾಗಗಳಿಗೆ ಸಂಬಂಧಿಸಿದ ಚಟುವಟಿಕೆಗಳು ಸಹ ನಡೆಯುತ್ತಿದ್ದು, ಇದರಲ್ಲಿ ತಮಿಳುನಾಡು ಮತ್ತು ಉತ್ತರ ಪ್ರದೇಶದ ಜನರು ಉತ್ಸಾಹದಿಂದ ಭಾಗವಹಿಸಿದ್ದಾರೆ.

ತಮಿಳುನಾಡು ಮತ್ತು ಕಾಶಿ ನಡುವಿನ ಹಳೆಯ ಸಂಬಂಧವನ್ನು ಪುನರುಜ್ಜೀವನಗೊಳಿಸುವಲ್ಲಿ ಕಾಶಿ ತಮಿಳು ಸಂಗಮಮ್ ಪ್ರಮುಖ ಪಾತ್ರ ವಹಿಸಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top