News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ʼಹಾವು ಸಾಕುತ್ತಿದ್ದೀರಿʼ: ಪಾಕಿಸ್ಥಾನಕ್ಕೆ ಭಯೋತ್ಪಾದನೆ ಬಗ್ಗೆ ಜೈಶಂಕರ್‌ ಎಚ್ಚರಿಕೆ

ನವದೆಹಲಿ: “ನೀವು ನಿಮ್ಮ ಅಂಗಳದಲ್ಲಿ ಹಾವುಗಳನ್ನು ಬೆಳೆಸುತ್ತಿದ್ದೀರಿ, ಆದರೆ ಅದು ನಿಮ್ಮ ನೆರೆಯವರಿಗೆ ಮಾತ್ರ ಕಚ್ಚುತ್ತದೆ ಎಂದು ನೀವು ಭಾವಿಸಿದ್ದರೆ, ಅದು ತಪ್ಪು!” ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ವಿಶ್ವಸಂಸ್ಥೆಯಲ್ಲಿ ಪಾಕಿಸ್ಥಾನಕ್ಕೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರ ಆಡಳಿತದಲ್ಲಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿಯಾಗಿದ್ದ ಹಿಲರಿ ಕ್ಲಿಂಟನ್ ಅವರು ಭಯೋತ್ಪಾದನೆಗೆ ಬೆಂಬಲದ ಬಗ್ಗೆ ಪಾಕಿಸ್ತಾನದ ಆಗಿನ ವಿದೇಶಾಂಗ ಸಚಿವೆ ಹಿನಾ ರಬ್ಬಾನಿ ಖಾನ್ ಅವರಿಗೆ ನೀಡಿದ ಎಚ್ಚರಿಕೆಯನ್ನು ಸ್ಮರಿಸಿರುವ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಅದೇ ಧಾಟಿಯಲ್ಲಿ ಪಾಕ್‌ಗೆ ತಿರುಗೇಟು ನೀಡಿದ್ದಾರೆ. ಈ ವೇಳೆ ವೇಳೆ, ಹಿನಾ ಕೂಡ ಅಲ್ಲೇ ಹಾಜರಿದ್ದರು. ಒಂದು ದಶಕದ ನಂತರ, ಅವರು ಈಗ ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವೆಯಾಗಿದ್ದಾರೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತವು ಭಯೋತ್ಪಾದನೆಯನ್ನು ಬೆಂಬಲಿಸುತ್ತಿದೆ ಎಂದು ಹಿನಾ ಗುರುವಾರ ಆರೋಪಿಸಿದ್ದರು. ಇದಕ್ಕೆ‌ ಖಡಕ್ ಪ್ರತಿಕ್ರಿಯೆ ನೀಡಿರುವ ಜೈಶಂಕರ್‌, ಇಸ್ಲಾಮಾಬಾದ್‌ನಲ್ಲಿ ಒಸಾಮಾ ಬಿನ್ ಲಾಡೆನ್‌ಗೆ ಆಶ್ರಯ ನೀಡಿದ ಬಗ್ಗೆ ಮತ್ತು ಸಂಸತ್ತಿನ ಮೇಲೆ ದಾಳಿ ಮಾಡಿದ್ದಕ್ಕಾಗಿ ನೇರವಾಗಿ ಟೀಕಿಸಿದರು.

ಇದಾದ ಬಳಿಕ ವಿಶ್ವಸಂಸ್ಥೆಯಲ್ಲಿ  ‘ಜಾಗತಿಕ ಭಯೋತ್ಪಾದನಾ ನಿಗ್ರಹ ಕ್ರಮ: ಸವಾಲುಗಳು ಮತ್ತು ಮುಂದಕ್ಕೆ ದಾರಿ’ ಎಂಬ ಶೀರ್ಷಿಕೆಯಡಿಯಲ್ಲಿ ನಡೆದ ಚರ್ಚೆಯಲ್ಲಿ ಜೈಶಂಕರ್ ಅವರು, “ಇಂದು ಜಗತ್ತು ಪಾಕಿಸ್ಥಾನ ಭಯೋತ್ಪಾದನೆಯ ಕೇಂದ್ರವಾಗಿದೆ ಎಂಬುದನ್ನು ನೋಡುತ್ತಿದೆ” ಎಂದಿದ್ದಾರೆ.

ಜೈಶಂಕರ್ ಅವರು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಅಫ್ಘಾನಿಸ್ತಾನದ ಭಯೋತ್ಪಾದನೆಯ ವಿಷಯವನ್ನು ಪ್ರಸ್ತಾಪಿಸಿದರು. ಅಫ್ಘಾನಿಸ್ತಾನ ಮತ್ತೆ ಭಯೋತ್ಪಾದನೆಯ ಕೇಂದ್ರವಾಗುವುದಿಲ್ಲ ಎಂದು ನಾವು ಭಾವಿಸುತ್ತೇವೆ ಎಂದು ಅವರು ಹೇಳಿದರು. ಪಾಕಿಸ್ತಾನವನ್ನು ಹೆಸರಿಸದೆ ಅಫ್ಘಾನಿಸ್ತಾನಕ್ಕೆ ಭಯೋತ್ಪಾದನೆಯನ್ನು ರಫ್ತು ಮಾಡುವಲ್ಲಿ ನೆರೆಯ ರಾಷ್ಟ್ರದ ಪಾತ್ರವಿದೆ ಎಂದು ಆರೋಪಿಸಿದರು.

ಭದ್ರತಾ ಮಂಡಳಿ ಸಭೆಯಲ್ಲಿ ಜೈಶಂಕರ್ ಅವರ ಭಾಷಣದಲ್ಲಿ ನ್ಯೂಯಾರ್ಕ್‌ನಲ್ಲಿ ನಡೆದ 9/11 ಭಯೋತ್ಪಾದಕ ದಾಳಿ ಮತ್ತು 26/11 ಮುಂಬೈ ದಾಳಿಯ ಬಗ್ಗೆಯೂ ಪ್ರಸ್ತಾಪಿಸಲಾಗಿದೆ. ಭಯೋತ್ಪಾದನೆಯನ್ನು ಎದುರಿಸಲು ಪಾಕಿಸ್ತಾನದ ವಿರುದ್ಧ ಅಂತರಾಷ್ಟ್ರೀಯ ಕ್ರಮಕ್ಕೆ ಅವರು ಕರೆ ನೀಡಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top