News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕಾಂಗ್ರೆಸ್‌ ಭಯೋತ್ಪಾದನೆಯ ಪರವೇ?: ಡಿಕೆಶಿ ವಿರುದ್ಧ ಸಿಎಂ ವಾಗ್ದಾಳಿ

ನವದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಡಿಕೆ ಶಿವಕುಮಾರ್ ಅವರು ಮಂಗಳೂರಿನಲ್ಲಿ ನಡೆದ ಕುಕ್ಕರ್ ಸ್ಫೋಟವನ್ನು‌ ಭಯೋತ್ಪಾದನೆಯಲ್ಲ ತಪ್ಪು ಕೃತ್ಯ ಎಂದು ಹೇಳಿದ ಹಿನ್ನೆಲೆಯಲ್ಲಿ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್‌ ಪಕ್ಷ ಭಯೋತ್ಪಾದನೆಯನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಿದ ಬೊಮ್ಮಾಯಿ, ಡಿಕೆ ಶಿವಕುಮಾರ್ ಅವರು ರಾಜ್ಯ ವಿಧಾನಸಭೆ ಚುನಾವಣೆಗೆ ಮುನ್ನ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ. ಹಳೆಯ ಪಕ್ಷ ಭಯೋತ್ಪಾದಕರ ಪರವಾಗಿದೆಯೇ ಎಂದು  ಪ್ರಶ್ನಿಸಿದರು.

“ಕುಕ್ಕರ್ ಸ್ಫೋಟ ಪ್ರಕರಣದಲ್ಲಿ ಭಯೋತ್ಪಾದಕ ಕೃತ್ಯ ಎಂಬುದು ತನಿಖೆಯಿಂದ ತಿಳಿದುಬಂದಿದ್ದು, ಆರೋಪಿ ಭಯೋತ್ಪಾದಕ ಎಂಬುದು ಪತ್ತೆಯಾಗಿದ್ದು, ಬಾಂಬ್ ತಯಾರಿಕೆ ಕೂಡ ನಡೆದಿತ್ತು. ಶಾಂತಿ ಕದಡಲು ನಗರ ಪ್ರದೇಶದಲ್ಲಿ ಸ್ಫೋಟ ನಡೆಸಲಾಗಿದೆ. ಪ್ರಕರಣದ ಆರೋಪಿಗಳಿಗೂ ಭಯೋತ್ಪಾದಕ ನಂಟು ಇರುವುದು ಬಹಿರಂಗವಾಗಿದೆ” ಎಂದಿದ್ದಾರೆ.

”ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಗಳನ್ನು ಬೆಂಬಲಿಸಲು ಯತ್ನಿಸುತ್ತಿರುವುದು ನಿಜಕ್ಕೂ ದುರದೃಷ್ಟಕರ, ಈ ಹಿಂದೆಯೂ ಕಾಂಗ್ರೆಸ್ ಪಕ್ಷ ಭಯೋತ್ಪಾದನೆಗೆ ಬೆಂಬಲ ನೀಡಿರುವುದು ಕಂಡು ಬಂದಿದೆ” ಎಂದಿದ್ದಾರೆ.

ಇನ್ನು, ಕಾಂಗ್ರೆಸ್ ನಾಯಕರು ಭಯೋತ್ಪಾದಕರ ಪರ ಎಂದು ಆರೋಪಿಸಿದ ಬೊಮ್ಮಾಯಿ, “ನಾನು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಖರ್ಗೆಯವರಿಗೆ ಅವರ ಪಕ್ಷ ಭಯೋತ್ಪಾದಕರ ಪರವೇ ಎಂದು ಕೇಳಲು ಬಯಸುತ್ತೇನೆ? ಅವರು ಭಯೋತ್ಪಾದನೆಯನ್ನು ಏಕೆ ಬೆಂಬಲಿಸುತ್ತಿದ್ದಾರೆ? ಅವರು ಭಯೋತ್ಪಾದನೆಯ ಪರವೋ ಅಥವಾ ಭಯೋತ್ಪಾದನೆಯ ವಿರುದ್ಧವೋ? ” ಎಂದಿದ್ದಾರೆ.

ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಅವರು ಮಂಗಳೂರು ಸ್ಫೋಟದ ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಿದ್ದಕ್ಕಾಗಿ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಪಕ್ಷವು ಭಯೋತ್ಪಾದನೆಯನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಿದರು.

ಈ ಕುರಿತು ಟ್ವಿಟರ್‌ನಲ್ಲಿ ಟ್ವೀಟ್ ಮಾಡಿರುವ ಪೂನಾವಾಲಾ, “ಐಎಸ್‌ಐಎಸ್‌ನೊಂದಿಗೆ ಸಂಪರ್ಕ ಹೊಂದಿರುವ ಶಂಕಿತ ಮಂಗಳೂರು ಸ್ಫೋಟ ಆರೋಪಿಗಳಿಗೆ ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಕ್ಲೀನ್ ಚಿಟ್ ನೀಡಿದೆ. ತನಿಖೆಯನ್ನು ಎನ್‌ಐಎ ವಹಿಸಿಕೊಂಡಿದೆ ಆದರೆ  ಕಾಂಗ್ರೆಸ್‌ ಹಿಂದೂ ಉಗ್ರವಾದದ ಹಣೆಪಟ್ಟಿ ಹಚ್ಚಿ ಇಸ್ಲಾಮಿ ಭಯೋತ್ಪಾದನೆಗೆ ಕ್ಲೀನ್ ಚಿಟ್ ನೀಡಿದೆ!” ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top