News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

2028-29ರ UNSC ಸದಸ್ಯತ್ವಕ್ಕೆ ಭಾರತದ ಉಮೇದುವಾರಿಕೆ ಘೋಷಣೆ

ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ 2028-29ರ ಅವಧಿಗೆ ಖಾಯಂ ಅಲ್ಲದ ಸದಸ್ಯರಾಗಿ ದೇಶದ ಉಮೇದುವಾರಿಕೆಯನ್ನು ವಿದೇಶಾಂಗ ಸಚಿವ ಎಸ್.ಜೈಶಂಕರ್‌ ಅವರು ಘೋಷಿಸಿದ್ದಾರೆ.

“ಭಾರತವು ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಮರಳಲು ಎದುರು ನೋಡುತ್ತಿದೆ. 2028-29ರ ಅವಧಿಗೆ ಖಾಯಂ ಅಲ್ಲದ ಸದಸ್ಯರಾಗಿ ದೇಶದ ಉಮೇದುವಾರಿಕೆಯನ್ನು ಘೋಷಿಸುತ್ತೇವೆ” ಎಂದು ಜೈಶಂಕರ್‌ ಹೇಳಿದ್ದಾರೆ.

ಭಯೋತ್ಪಾದನೆ ನಿಗ್ರಹದ ಕುರಿತು ಸಹಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ನಂತರ ಯುಎನ್ ಸೆಕ್ಯುರಿಟಿ ಕೌನ್ಸಿಲ್ ಸ್ಟೇಕ್‌ಔಟ್‌ನಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಜೈಶಂಕರ್, ಡಿಸೆಂಬರ್ ಭಾರತದ ಪ್ರಸ್ತುತ ಭದ್ರತಾ ಮಂಡಳಿಯ ಸದಸ್ಯತ್ವದ ಕೊನೆಯ ತಿಂಗಳಾಗಿದೆ, ಭಾರತವು ಎಂಟನೇ ಬಾರಿ ಪ್ರಬಲ ಸ್ಥಾನದಲ್ಲಿ ಕುಳಿತಿದೆ ಎಂದರು.

2028-29ರ ಮಂಡಳಿಯಲ್ಲಿ ನಮ್ಮ ಮುಂದಿನ ಅಧಿಕಾರಾವಧಿಗೆ ನಾವು ನಮ್ಮ ಉಮೇದುವಾರಿಕೆಯನ್ನು ಘೋಷಿಸಿದ್ದೇವೆ ಮತ್ತು ಹಿಂತಿರುಗಲು ನಾವು ಎದುರು ನೋಡುತ್ತಿದ್ದೇವೆ ಎಂದು ತಿಳಿಸಲು ನನಗೆ ಸಂತೋಷವಾಗಿದೆ ಎಂದಿದ್ದಾರೆ.

ಭಾರತವು ಚುನಾಯಿತ ಮಂಡಳಿಯಲ್ಲಿ ಸದಸ್ಯರಾಗಿ ಡಿಸೆಂಬರ್ 31 ರಂದು  ಎರಡು ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಲು ತಯಾರಿ ನಡೆಸುತ್ತಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top