News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೋದಿ ವಿರುದ್ಧ ವೈಯಕ್ತಿಕ ಟೀಕೆಗಿಳಿದ ಪಾಕ್‌ ನಾಯಕರು

ನವದೆಹಲಿ: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ನೀಡಿರುವ ಕಟು ಹೇಳಿಕೆಯು ಭಯೋತ್ಪಾದಕ ಪೋಷಕ ಇಸ್ಲಾಮಿಕ್ ರಾಷ್ಟ್ರ ಪಾಕಿಸ್ತಾನವನ್ನು ಎಷ್ಟರಮಟ್ಟಿಗೆ ಕೆರಳಿಸಿದೆ ಎಂದರೆ ಇದೀಗ ಅದರ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವೈಯಕ್ತಿಕ ದ್ವೇಷ ಕಾರುವ ಟೀಕೆಗಳನ್ನು ಮಾಡುತ್ತಿದ್ದಾರೆ.

ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿದ್ದಾರೆ.

ಪಾಕಿಸ್ತಾನ ಭಾರತಕ್ಕಿಂತ ಹೆಚ್ಚು ಜನರನ್ನು ಭಯೋತ್ಪಾದನೆಯಿಂದ ಕಳೆದುಕೊಂಡಿದೆ ಮತ್ತು ಪಾಕಿಸ್ತಾನವು ಭಯೋತ್ಪಾದನೆಯನ್ನು ಬೆಂಬಲಿಸಲು ಯಾವುದೇ ಕಾರಣವಿಲ್ಲ. ಒಸಾಮಾ ಬಿನ್ ಲಾಡೆನ್ ಸತ್ತಿದ್ದರೂ, ಗುಜರಾತ್‌ನ ಕಟುಕ ಇನ್ನೂ ಜೀವಂತವಾಗಿದ್ದಾನೆ ಮತ್ತು ಭಾರತದ ಪ್ರಧಾನಿಯಾಗುವ ಮೊದಲು ಯುಎಸ್‌ಎಗೆ ಪ್ರವೇಶಿಸುವುದಕ್ಕೆ ಆತನಿಗೆ ನಿಷೇಧವಿತ್ತು ಎಂದು ಬಿಲಾವಲ್ ತೀವ್ರ ಕೆಳಮಟ್ಟದ ಹೇಳಿಕೆಯನ್ನು ನೀಡಿದ್ದಾರೆ.

“ಪಾಕಿಸ್ತಾನದಲ್ಲಿ ರಾಜಕೀಯ ಪಕ್ಷಗಳು, ನಾಗರಿಕ ಸಮಾಜ ಮತ್ತು ಜನರು, ಭಯೋತ್ಪಾದನೆಗೆ ಬಲಿಯಾಗಿದ್ದಾರೆ. ನಾವು ಭಾರತಕ್ಕಿಂತ ಹೆಚ್ಚಿನ ಜೀವಗಳನ್ನು ಭಯೋತ್ಪಾದನೆಗೆ ಕಳೆದುಕೊಂಡಿದ್ದೇವೆ. ಏಕೆ, ಏಕೆ, ನಾವು ನಮ್ಮ ಸ್ವಂತ ಜನರನ್ನು ಏಕೆ ಹತ್ಯೆ ಮಾಡಲು ಬಯಸುತ್ತೇವೆ? ಎಂದಿದ್ದಾರೆ.

“ಆರ್‌ಎಸ್‌ಎಸ್‌ನ ಪ್ರಧಾನ ಮಂತ್ರಿ ಮತ್ತು ಆರ್‌ಎಸ್‌ಎಸ್‌ನ ವಿದೇಶಾಂಗ ಮಂತ್ರಿಯನ್ನು ಭಾರತ ಹೊಂದಿದೆ. ಆರ್‌ಎಸ್‌ಎಸ್ ಎಂದರೇನು? ಆರ್‌ಎಸ್‌ಎಸ್‌ಗೆ ಸ ಹಿಟ್ಲರ್‌ನ ಎಸ್‌ಎಸ್‌ ಸ್ಪೂರ್ತಿ” ಎಂದು ಭುಟ್ಟೋ ಹೇಳಿದ್ದಾರೆ.

ಭುಟ್ಟೋ ಹೇಳಿಕೆಗೆ ಭಾರತದಲ್ಲಿ ವ್ಯಾಪಕ ಆಕ್ರೋಶಗಳು ವ್ಯಕ್ತವಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top