ನವದೆಹಲಿ: ಭಾರತಕ್ಕೆ ಇತರ ದೇಶಗಳ ಮೇಲೆ ಪ್ರಾಬಲ್ಯ ಸಾಧಿಸುವ ಯಾವುದೇ ಇಚ್ಛೆಯಿಲ್ಲ ಅಥವಾ ಇತರ ದೇಶಗಳ ಭೂಮಿಯನ್ನೂ ಅದು ವಶಪಡಿಸಿಕೊಳ್ಳಲು ಬಯಸುವುದಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ದೆಹಲಿಯಲ್ಲಿ ನಡೆದ 95ನೇ ಎಫ್ಐಸಿಸಿಐ ವಾರ್ಷಿಕ ಸಮಾವೇಶ ಮತ್ತು ಎಜಿಎಂನಲ್ಲಿ ಮಾತನಾಡಿದ ಅವರು, ಭಾರತವು ಸೂಪರ್ ಪವರ್ ಆಗುವ ಪ್ರಯಾಣದಲ್ಲಿದೆ. ಆದರೆ ಅದು ಇತರ ದೇಶಗಳ ಮೇಲೆ ಪ್ರಾಬಲ್ಯ ಸಾಧಿಸುವ ಅನ್ವೇಷಣೆಯಲ್ಲ. ಲೋಕಕಲ್ಯಾಣಕ್ಕಾಗಿ ದುಡಿಯುವ ಮಹಾಶಕ್ತಿಯಾಗುವುದು ಭಾರತ ಬಯಕೆ ಎಂದಿದ್ದಾರೆ.
“ಪ್ರಧಾನಿ ಅವರು ಕೆಂಪು ಕೋಟೆಯಲ್ಲಿ ತಮ್ಮ ಭಾಷಣದಲ್ಲಿ ದೇಶಕ್ಕೆ ಐದು ಪ್ರತಿಜ್ಞೆಗಳ ಬಗ್ಗೆ ಮಾತನಾಡಿದರು, ಇದು ಭಾರತವನ್ನು ಸೂಪರ್ ಪವರ್ ಮಾಡಲು ಅವಶ್ಯಕವಾಗಿದೆ” ಎಂದರು.
ಚೀನಾ ಮತ್ತು ಭಾರತದ ಬೆಳೆಯುತ್ತಿರುವ ಆರ್ಥಿಕ ಸಾಮರ್ಥ್ಯದ ಬಗ್ಗೆ ಮಾತನಾಡಿದ ಅವರು, “1949ರಲ್ಲಿ ಚೀನಾದ ಜಿಡಿಪಿ ಭಾರತಕ್ಕಿಂತ ಕಡಿಮೆ ಇತ್ತು, 1980ರವರೆಗೂ ಭಾರತ ಟಾಪ್ 10 ಆರ್ಥಿಕತೆಗಳ ಪಟ್ಟಿಯಲ್ಲಿ ಇರಲಿಲ್ಲ. 2014ರಲ್ಲಿ ಭಾರತ ವಿಶ್ವ ಆರ್ಥಿಕತೆಯಲ್ಲಿ 9ನೇ ಸ್ಥಾನಕ್ಕೆ ಬಂದಿತು.ಇಂದು ಭಾರತ $3.5 ಟ್ರಿಲಿಯನ್ ಆರ್ಥಿಕತೆಗೆ ಹತ್ತಿರದಲ್ಲಿದೆ ಮತ್ತು ವಿಶ್ವದಲ್ಲಿ 5ನೇ ಅತಿ ದೊಡ್ಡ ಆರ್ಥಿಕತೆಯಾಗಿದೆ” ಎಂದರು.
ತವಾಂಗ್ ಬಳಿ ಭಾರತ ಮತ್ತು ಚೀನಾದ ಪಡೆಗಳ ನಡುವಿನ ಇತ್ತೀಚಿನ ಘರ್ಷಣೆಯನ್ನು ಉಲ್ಲೇಖಿಸಿದ ಅವರು, “ಅದು ಗಾಲ್ವಾನ್ ಅಥವಾ ತವಾಂಗ್ ಆಗಿರಲಿ, ನಮ್ಮ ರಕ್ಷಣಾ ಪಡೆಗಳು ತಮ್ಮ ಶೌರ್ಯ ಮತ್ತು ವೀರತ್ವವನ್ನು ಸಾಬೀತುಪಡಿಸಿವೆ” ಎಂದು ಹೇಳಿದರು.
PM during his address from Red Fort talked about five pledges to the country, which are essential to make India super power & it shouldn't be considered that we want to dominate any country or we've the intention to capture even one inch land of any other country:Defence Minister pic.twitter.com/boTuMLoMoB
— ANI (@ANI) December 17, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.