News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಇದು 1962 ರ ಭಾರತವಲ್ಲ: ಸೇನೆಗೆ ಅವಮಾನಿಸಿದ ರಾಹುಲ್‌ಗೆ ಅನುರಾಗ್ ಠಾಕೂರ್‌

ನವದೆಹಲಿ: ಭಾರತ-ಚೀನಾ ಗಡಿ ವಿವಾದದ ಕುರಿತು ಹೇಳಿಕೆ ನೀಡುವಾಗ ಭಾರತೀಯ ಸೈನಿಕರಿಗೆ ಅಪಮಾನ ಮಾಡಿರುವ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಅನುರಾಗ್ ಠಾಕೂರ್ ವಾಗ್ದಾಳಿ ನಡೆಸಿದ್ದಾರೆ. ರಾಹುಲ್‌ಗೆ ದೇಶ ಮತ್ತು ಸೇನೆಯ ಮೇಲೆ ನಂಬಿಕೆ ಇಲ್ಲ ಎಂದಿದ್ದಾರೆ.

“2020 ರ ಗಾಲ್ವಾನ್ ಘರ್ಷಣೆಯ ನಂತರ ಇನ್ನೂ ಉದ್ವಿಗ್ನತೆ ಇದ್ದು, ಚೀನಾದೊಂದಿಗಿನ ಗಡಿ ಘರ್ಷಣೆಯನ್ನು ಕೇಂದ್ರ ಸರ್ಕಾರ ಸೂಕ್ತವಾಗಿ ನಿಭಾಯಿಸಿಲ್ಲ. ಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆ, ಆಕ್ರಮಣಕ್ಕೆ ಅಲ್ಲ. ಅವರ ಅಸ್ತ್ರಗಳ ಮಾದರಿ ನೋಡಿದರೆ ತಿಳಿಯುತ್ತದೆ ಅವರು ಯುದ್ಧಕ್ಕೆ ತಯಾರಿ ನಡೆಸುತ್ತಿದ್ದಾರೆ‌ ಎಂಬುದು. ನಮ್ಮ ಸರ್ಕಾರ ಅದನ್ನು ಒಪ್ಪಿಕೊಳ್ಳುತ್ತಿಲ್ಲ. ಭಾರತ ಸರ್ಕಾರವು ಘಟನೆಗಳ ಮೇಲೆ ಕೆಲಸ ಮಾಡುತ್ತಿದೆ ಹೊರತು ತಂತ್ರದ ಮೇಲೆ ಅಲ್ಲ. ಚೀನಾ ನಮ್ಮ ಭೂಮಿಯನ್ನು ವಶಪಡಿಸಿಕೊಂಡಿದೆ, ಅವರು ನಮ್ಮ ಸೈನಿಕರನ್ನು ಹೊಡೆದುರುಳಿಸುತ್ತಿದ್ದಾರೆ, ಚೀನಾದ ಬೆದರಿಕೆ ಸ್ಪಷ್ಟವಾಗಿದೆ ಮತ್ತು ಸರ್ಕಾರ ಅದನ್ನು ಮರೆಮಾಡುತ್ತಿದೆ, ಅದನ್ನು ನಿರ್ಲಕ್ಷಿಸಿದೆ. ಚೀನಾ ಲಡಾಖ್ ಮತ್ತು ಅರುಣಾಚಲದಲ್ಲಿ ಆಕ್ರಮಣಕ್ಕೆ ತಯಾರಿ ನಡೆಸುತ್ತಿದೆ ಮತ್ತು ಭಾರತ ಸರ್ಕಾರ ಮಲಗಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದರು.

ರಾಹುಲ್ ಗಾಂಧಿ ಮಾತಿಗೆ ತಿರುಗೇಟು ನೀಡಿರುವ ಠಾಕೂರ್‌ ಅವರು, ಭಾರತೀಯ ಸೇನೆಯನ್ನು ರಾಹುಲ್ ಟೀಕಿಸುತ್ತಿದ್ದಾರೆ.‌ ಕಾಂಗ್ರೆಸ್‌ಗೆ ನಮ್ಮ ದೇಶದ ಮೇಲೆ ನಂಬಿಕೆ ಇಲ್ಲ ಎಂದು ಹೇಳಿದ್ದಾರೆ.

“ಡೋಕ್ಲಾಮ್ ಘಟನೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಚೀನಾದ ಅಧಿಕಾರಿಗಳೊಂದಿಗೆ ಸೂಪ್ ಸೇವಿಸುತ್ತಿರುವುದು ಕಂಡುಬಂದಿತ್ತು, ಆದರೆ ಭಾರತೀಯ ಸೇನೆಯು ಚೀನಾದ ಸೈನಿಕರೊಂದಿಗೆ ಹೋರಾಡುತ್ತಿದೆ. ಭಾರತೀಯ ಸೇನೆಯು ಸರ್ಜಿಕಲ್ ಸ್ಟ್ರೈಕ್ ಮಾಡಿದಾಗ ಅವರು ನಮ್ಮನ್ನು ಪ್ರಶ್ನಿಸಿದರು. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ನಮ್ಮ ಸೈನ್ಯದ ಮೇಲೆ ನಂಬಿಕೆ ಇಲ್ಲ” ಎಂದಿದ್ದಾರೆ.

“ಭಾರತದಲ್ಲಿ ಇಂದು 300 ಕ್ಕೂ ಹೆಚ್ಚು ರಕ್ಷಣಾ ವಸ್ತುಗಳು ತಯಾರಾಗುತ್ತಿವೆ. ಭಾರತ ಈಗ ರಕ್ಷಣಾ ಸಾಧನಗಳ ರಫ್ತುದಾರ, ಇನ್ನು ಮುಂದೆ ಆಮದುದಾರನಲ್ಲ. ಇದು ‘ಆತ್ಮನಿರ್ಭರ್ ಭಾರತ’. ಡೋಕ್ಲಾಮ್ ಘಟನೆಯ ಸಂದರ್ಭದಲ್ಲಿಯೂ ಪ್ರಧಾನಿ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನಮ್ಮ ಸೇನೆಯನ್ನು ಭೇಟಿ ಮಾಡಿದ್ದರು” ಎಂದಿದ್ದಾರೆ.

“ಇದು 1962 ರ ಭಾರತವಲ್ಲ, ಇದು 2014 ರ ಭಾರತ. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಭಾರತ ಮುನ್ನಡೆಯುತ್ತಿದೆ. ಯುಪಿಎ ಸರ್ಕಾರಕ್ಕೆ 10 ವರ್ಷಗಳ ಅವಧಿಗೆ ನಮ್ಮ ಸೇನೆಗೆ ಯುದ್ಧ ವಿಮಾನಗಳು, ಬುಲೆಟ್ ಪ್ರೂಫ್ ಜಾಕೆಟ್ ಅಥವಾ ಸ್ನೋ ಬೂಟುಗಳನ್ನು ಖರೀದಿಸಲು ಸಾಧ್ಯವಾಗಲಿಲ್ಲ. ನೀವು ನಮ್ಮ ಸೇನೆಗಾಗಿ ಏನು ಮಾಡುತ್ತಿದ್ದೀರಿ?” ಎಂದು ಠಾಕೂರ್‌ ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top