ನವದೆಹಲಿ: ಅರುಣಾಚಲ ಪ್ರದೇಶದ ತವಾಂಗ್ನಲ್ಲಿರುವ ಯಾಂಗ್ತ್ಸೆ ಪ್ರದೇಶಕ್ಕೆ ಕೇಂದ್ರ ಸಚಿವ ಕಿರೆನ್ ರಿಜಿಜು ಭೇಟಿ ನೀಡಿದ್ದು, ಪ್ರದೇಶವು ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎಂದು ಹೇಳಿದ್ದಾರೆ.
ಅರುಣಾಚಲ ಪ್ರದೇಶದ ತವಾಂಗ್ನಲ್ಲಿರುವ ಯಾಂಗ್ಟ್ಸೆ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಭಾರತೀಯ ಸೇನೆಯ ಕೆಚ್ಚೆದೆಯ ಯೋಧರ ಸಮರ್ಪಕ ನಿಯೋಜನೆಯಿಂದಾಗಿ ಈ ಪ್ರದೇಶವು ಈಗ ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎಂದು ಹೇಳಿದರು.
ಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದೆ ಎಂದು ಹೇಳಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಸಚಿವರು, ಕಾಂಗ್ರೆಸ್ ನಾಯಕರು ಭಾರತೀಯ ಸೇನೆಯನ್ನು ಅವಮಾನಿಸುವುದಲ್ಲದೆ ರಾಷ್ಟ್ರದ ಪ್ರತಿಷ್ಠೆಗೆ ಧಕ್ಕೆ ತರುತ್ತಿದ್ದಾರೆ ಎಂದು ಹೇಳಿದರು.
ರಾಹುಲ್ ಹೇಳಿಕೆ ಕಾಂಗ್ರೆಸ್ ಪಕ್ಷಕ್ಕೆ ಮಾತ್ರವಲ್ಲದೆ ದೇಶಕ್ಕೆ ದೊಡ್ಡ ಮುಜುಗರವಾಗಿದೆ ಎಂದಿದ್ದಾರೆ.
ಸಶಸ್ತ್ರ ಪಡೆಗಳ ಬಗ್ಗೆ ರಾಒಷ್ಟ್ರವು ಹೆಮ್ಮೆಪಡುತ್ತದೆ ಎಂದಿದ್ದಾರೆ.
ತವಾಂಗ್ನ ಜನರು ಕೂಡ ರಾಹುಲ್ ಗಾಂಧಿಯವರ ಹೇಳಿಕೆಯನ್ನು ಖಂಡಿಸಿದ್ದಾರೆ.
Yangtse area in Tawang, Arunachal Pradesh is fully secured now due to adequate deployment of the brave jawans of Indian Army. pic.twitter.com/PVrW7usMyn
— Kiren Rijiju (@KirenRijiju) December 17, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.