News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪ್ರಧಾನಿಯವರಿಗೆ ಅವಮಾನ ಖಂಡಿಸಿ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಪಾಕಿಸ್ತಾನದ ವಿದೇಶಾಂಗ ಸಚಿವ ಭಿಲಾವಲ್ ಭುಟ್ಟೊ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದು ಪಾಕಿಸ್ತಾನದ ನ್ಯೂನತೆಯನ್ನು ಬಹಿರಂಗಪಡಿಸಿದೆ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಡಾ.ಸಂದೀಪ್ ಕುಮಾರ್ ಕೆ.ಸಿ.  ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನದ ಸಚಿವರ ಹೇಳಿಕೆ ಮತ್ತು ಕಾಂಗ್ರೆಸ್ ಪಕ್ಷದ ವರ್ತನೆಯನ್ನು ಖಂಡಿಸಿ ನಗರದ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಇಂದು ಬಿಜೆಪಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಪಾಕಿಸ್ತಾನವು ಭಯೋತ್ಪಾದಕರ ತಾಣವಾಗಿದೆ. ಜಗತ್ತಿಗೇ ಮಾರ್ಗದರ್ಶನ ಮಾಡುತ್ತಿರುವ ಮೋದಿ ಅವರ ಬಗ್ಗೆ ಅಂಥಹ ದೇಶದ ಸಚಿವರು ಮಾತನಾಡಿ ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ ಎಂದು ಟೀಕಿಸಿದರು.

ನಮ್ಮ ಸೈನಿಕರು ಚೀನಾವನ್ನು ಹಿಮ್ಮೆಟ್ಟಿಸುತ್ತಿದ್ದಾರೆ. ಇನ್ನೊಂದೆಡೆ ರಾಹುಲ್ ಗಾಂಧಿಯವರು ನಮ್ಮ ಸೈನಿಕರ ಶೌರ್ಯವನ್ನು ಪ್ರಶ್ನಿಸುವ ಮತ್ತು ಅಣಕಿಸುವ ಮಾದರಿಯಲ್ಲಿ ವ್ಯಂಗ್ಯವಾಡಿದ್ದಾರೆ. ಇದು ಖಂಡನೀಯ ಎಂದರು.

ರಾಜ್ಯದಲ್ಲಿ ಚುನಾವಣೆ ದೃಷ್ಟಿಯಿಂದ ಕೇವಲ ಅಲ್ಪಸಂಖ್ಯಾತರ ಮತಕ್ಕಾಗಿ ಇಲ್ಲಿನ ಕಾಂಗ್ರೆಸ್ ನಾಯಕರು ಪ್ರತಿಯೊಂದು ವಿಚಾರದಲ್ಲೂ ಭಯೋತ್ಪಾದಕರ ಪರ ನಿಂತಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಕುಕ್ಕರ್ ಬಾಂಬ್ ಪ್ರಕರಣದ ಆರೋಪಿಯ ಪರ ವಹಿಸಿಕೊಂಡು ಮಾತನಾಡುವ ಹೀನ ಪರಿಸ್ಥಿತಿಗೆ ತಲುಪಿಸಿದ್ದಾರೆ ಎಂದು ಆಕ್ಷೇಪಿಸಿದರು.

ಮುಸಲ್ಮಾನರ ಮತಕ್ಕಾಗಿ ಕೀಳುಮಟ್ಟದ ರಾಜಕೀಯ ಮಾಡಲು ಸಿದ್ಧ ಎಂಬುದನ್ನು ಕಾಂಗ್ರೆಸ್ ರಾಜ್ಯ ಅಧ್ಯಕ್ಷರು ರುಜುವಾತು ಮಾಡಿದ್ದಾರೆ. ಸಿದ್ದರಾಮಯ್ಯರವರು ಕೂಡ ಟಿಪ್ಪು ಓಲೈಕೆ ಮಾಡುತ್ತಿದ್ದಾರೆ. ಇದು ಶಾಂತಿ ಸೌಹಾರ್ದತೆ ಹಾಳು ಮಾಡುವ ಪ್ರಯತ್ನ ಎಂದು ಆರೋಪಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಪಡೆಯುವುದಿಲ್ಲ. ಮತ್ತೆ ಬಿಜೆಪಿಗೇ ಅಧಿಕಾರ ಖಚಿತ. ಕಾಂಗ್ರೆಸ್ ಪಕ್ಷವೇನಾದರೂ ಅಧಿಕಾರ ಪಡೆದರೆ ಭಯೋತ್ಪಾದಕರಿಗಾಗಿ ಒಂದು ಸಂಪುಟ ದರ್ಜೆಯ ಸಚಿವ ಸ್ಥಾನ ಮೀಸಲಿಡುವ ಸ್ಥಿತಿ ಬರಬಹುದು. ಇದನ್ನು ಕಾರ್ಯಕರ್ತರು ಜನರಿಗೆ ಮನವರಿಕೆ ಮಾಡಿಕೊಡಬೇಕಿದೆ ಎಂದು ತಿಳಿಸಿದರು.

ಭಯೋತ್ಪಾದಕರನ್ನು ಪ್ರೋತ್ಸಾಹಿಸುವ ಕಾಂಗ್ರೆಸ್ ಪಕ್ಷವನ್ನು ಧಿಕ್ಕರಿಸಬೇಕು. ಕಾಂಗ್ರೆಸ್ಸಿನ ಈ ಧೋರಣೆ ಕುರಿತು ಜಿಲ್ಲೆ, ತಾಲ್ಲೂಕು ಮತ್ತು ಮಂಡಲ ಮಟ್ಟದಲ್ಲಿ ಜನಜಾಗೃತಿ ಮೂಡಿಸಬೇಕು ಎಂದು ವಿನಂತಿಸಿದರು. ಪಾಕ್ ಸಚಿವರು ಮೋದಿಜಿ ಅವರ ಕ್ಷಮೆ ಯಾಚಿಸಬೇಕು. ಡಿ.ಕೆ.ಶಿವಕುಮಾರ್ ಅವರು ಜನತೆ, ಪೊಲೀಸರು ಮತ್ತು ದೇಶದ ರಕ್ಷಣಾ ಇಲಾಖೆಯ ಕ್ಷಮೆ ಕೇಳಬೇಕು ಎಂದು ಅವರು ಆಗ್ರಹಿಸಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top