ಬೆಂಗಳೂರು: ರಾಜ್ಯ ಮತ್ತು ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ಬಿಜೆಪಿ ಶ್ರಮಿಸುತ್ತಿದೆ. ಅಭಿವೃದ್ಧಿಗಾಗಿ ಡಬಲ್ ಎಂಜಿನ್ ಸರಕಾರ ಬೇಕು. ಅದಕ್ಕಾಗಿ ಕಾರ್ಯಕರ್ತರು ಶ್ರಮ ವಹಿಸಿ ದುಡಿಯಬೇಕು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ತಿಳಿಸಿದರು.
ನಗರದ ಅರಮನೆ ಮೈದಾನದ “ಗಾಯತ್ರಿ ವಿಹಾರ”ದಲ್ಲಿ ಇಂದು ರಾಜ್ಯ ಪ್ರಕೋಷ್ಠಗಳ ಸಮಾವೇಶ ‘ಶಕ್ತಿ ಸಂಗಮ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ಸೇರಿ ದೇಶಾದ್ಯಂತ ರೈಲ್ವೆ ವ್ಯವಸ್ಥೆಯನ್ನು ವಿಮಾನನಿಲ್ದಾಣಗಳ ಮಾದರಿಯಲ್ಲಿ ವಿಶ್ವ ಗುಣಮಟ್ಟದ ಆಧುನೀಕರಣಗೊಳಿಸಲಾಗುತ್ತಿದೆ. ಆಧುನಿಕ ಮಾದರಿಯಲ್ಲಿ ವಿವಿಧ ರೈಲ್ವೆ ನಿಲ್ದಾಣಗಳನ್ನು ವ್ಯವಸ್ಥೆಗೊಳಿಸಿದ್ದು, ಪ್ರಯಾಣಿಕ ಸ್ನೇಹಿಯಾಗಿ ಮಾಡಲಾಗಿದೆ ಎಂದು ವಿವರಿಸಿದರು. ಪವರ್ ಪಾಯಿಂಟ್ ಪ್ರೆಸೆಂಟೇಶನ್ ಮೂಲಕ ವಿವಿಧ ರೈಲ್ವೆ ನಿಲ್ದಾಣಗಳ ವ್ಯವಸ್ಥೆಯನ್ನು ಅವರು ಪರಿಚಯಿಸಿದರು.
ಸಣ್ಣ ಪಟ್ಟಣಗಳಲ್ಲೂ ಇಂಥ ಕಾರ್ಯಗಳು ನಡೆದಿವೆ. ರಾಜ್ಯದ 48 ರೈಲ್ವೆ ಸ್ಟೇಶನ್ಗಳ ಆಧುನೀಕರಣ ನಡೆಯುತ್ತಿದೆ. ಬೆಂಗಳೂರಿನ ಯಶವಂತಪುರ, ಬೆಂಗಳೂರು ಸಿಟಿ, ಮಂಗಳೂರು ಸೆಂಟ್ರಲ್, ಮೈಸೂರು, ಹುಬ್ಬಳ್ಳಿ, ಅರಸೀಕರೆ, ರಾಣೆಬೆನ್ನೂರು, ಹರಿಹರ, ಸಕಲೇಶಪುರ, ತರೀಕೆರೆ, ತಾಳಗುಪ್ಪ, ಚಾಮರಾಜನಗರ, ಕಿತ್ತೂರು, ಸುಬ್ರಹ್ಮಣ್ಯ ರೋಡ್, ವೈಟ್ಫೀಲ್ಡ್, ಕೆಂಗೇರಿ, ಮಲ್ಲೇಶ್ವರ, ಚನ್ನಸಂದ್ರ, ತುಮಕೂರು, ಮಲ್ಲೂರು, ರಾಮನಗರ, ದೊಡ್ಡಬಳ್ಳಾಪುರ, ಚನ್ನಪಟ್ಟಣ, ಗದಗ, ಕೊಪ್ಪಳ, ಗಿಣಿಗೇರ, ಮುನಿರಾಬಾದ್, ಬಳ್ಳಾರಿಯ 2, ಹಗರಿಬೊಮ್ಮನಹಳ್ಳಿ, ಕೊತ್ತೂರು, ಕುಡಚಿ, ಘಟಪ್ರಭಾ, ಲೋಂಡಾ, ಹೊಳೆಹೊಲ್ಲೂರು, ಆಲಮಟ್ಟಿ, ಯಾಳಗಿ ಮೊದಲಾದ ಸ್ಟೇóಷನ್ಗಳು ವಿಶ್ವ ಗುಣಮಟ್ಟದೊಂದಿಗೆ ಆಧುನೀಕರಣಗೊಳ್ಳಲಿವೆ ಎಂದು ತಿಳಿಸಿದರು.
ಇದಾದ ಬಳಿಕ ರಾಜ್ಯದಲ್ಲಿ ಇನ್ನೂ 50 ಸ್ಟೇಷನ್ಗಳ ಆಧುನೀಕರಣ ಮಾಡುತ್ತೇವೆ. ಅಭಿವೃದ್ಧಿಗಾಗಿ ಡಬಲ್ ಎಂಜಿನ್ ಸರಕಾರ ಬೇಕು. ಅದಕ್ಕಾಗಿ ಕಾರ್ಯಕರ್ತರು ಶ್ರಮ ವಹಿಸಿ ದುಡಿಯಬೇಕು ಎಂದು ಮನವಿ ಮಾಡಿದರು.
ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಮಾರ್ಗದರ್ಶನ ಮಾಡಿದರು. ಸಮಾರೋಪ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಅವರು ಮಾರ್ಗದರ್ಶನ ಮಾಡಿದರು.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಮಾತನಾಡಿ, ಹಿಂದೆ ಕಲ್ಯಾಣಮಂಟಪದಲ್ಲಿ ಪಕ್ಷದ ಸಭೆ ನಡೆಸುವ ಸ್ಥಿತಿ ಇತ್ತು. ಈಗ ಬಿಜೆಪಿ ಸಾಮಥ್ರ್ಯ ಸ್ಪಷ್ಟಗೊಳ್ಳುತ್ತಿದೆ. ಅತಿ ಹೆಚ್ಚು ಸಂಸದರು, ಶಾಸಕರು, 18 ರಾಜ್ಯಗಳಲ್ಲಿ ಅಧಿಕಾರ ಪಡೆದ ದೊಡ್ಡ ಪಕ್ಷ ಬಿಜೆಪಿ ಎಂದು ವಿವರಿಸಿದರು.
ಇಷ್ಟಾದರೂ ನಾನೇ ಮುಖ್ಯಮಂತ್ರಿ ಎನ್ನುವವರಿಗೆ ಅದು ತಿರುಕನ ಕನಸು ಎನ್ನಬಹುದಲ್ಲವೇ ಎಂದು ಪ್ರಶ್ನಿಸಿದರು. 100 ಜನ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಬಂದರೂ ಬಿಜೆಪಿಯನ್ನು ಸೋಲಿಸಲಾಗದು. ನಮ್ಮ ಪಕ್ಷದ ತಾಕತ್ತು ಕಾರ್ಯಕರ್ತರಲ್ಲಿದೆ. ಅದನ್ನು ಯಾರೂ ಎದುರಿಸಲು ಸಾಧ್ಯವಾಗದು ಎಂದು ತಿಳಿಸಿದರು. ಬಿಜೆಪಿ ಮೂಲಸೌಕರ್ಯ ವೃದ್ಧಿಗೆ ಆದ್ಯತೆ ಕೊಟ್ಟಿದೆ ಎಂದು ವಿವರಿಸಿದರು. ದೇಶದ ಜನರ ಮನಸ್ಸು ಜೋಡಿಸುವ ಜೊತೆಗೆ ಅಭಿವೃದ್ಧಿಗೆ ನರೇಂದ್ರ ಮೋದಿಜಿ ಆದ್ಯತೆ ಕೊಟ್ಟಿದ್ದಾರೆ ಎಂದು ತಿಳಿಸಿದರು.
ಕಿಸಾನ್ ಸಮ್ಮಾನ್, ಗರೀಬಿ ಕಲ್ಯಾಣ್ ಅನ್ನ ಯೋಜನೆ, ಕೋವಿಡ್ ಉಚಿತ ಲಸಿಕೆ ಸೇರಿದಂತೆ ಅನೇಕ ಜನಪರ ಯೋಜನೆಗಳನ್ನು ಬಿಜೆಪಿ ಸರಕಾರ ಜಾರಿಗೊಳಿಸಿದೆ ಎಂದು ವಿವರಿಸಿದರು. ಮೋದಿಯವರು ಜನರ ಹೃದಯದಲ್ಲಿದ್ದಾರೆ ಎಂಬುದಕ್ಕೆ ಗುಜರಾತ್ ಚುನಾವಣೆಯ ಫಲಿತಾಂಶವೇ ಸಾಕ್ಷಿ ಎಂದು ತಿಳಿಸಿದರು.
ಮತಾಂಧತೆಯ ರಾಜಕಾರಣ ಮಾಡಿದ ಸಿದ್ದರಾಮಯ್ಯರಿಗೆ ಮತ್ತೆ ಅವಕಾಶ ಕೊಡದಿರಿ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಧ್ಯೇಯಕ್ಕಾಗಿ ಮತ್ತೆ ಬಿಜೆಪಿಯನ್ನು ಗೆಲ್ಲಿಸಿ ಎಂದು ಸಿ.ಟಿ.ರವಿ ಮನವಿ ಮಾಡಿದರು.
ಮಾಜಿ ಸಿಎಂ ಡಿ.ವಿ.ಸದಾನಂದಗೌಡ, ಸಂಸದ ಪಿ.ಸಿ.ಮೋಹನ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್.ರವಿಕುಮಾರ್, ಸಿದ್ದರಾಜು, ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಂ.ಬಿ. ಭಾನುಪ್ರಕಾಶ್, ಸಹ ಸಂಯೋಜಕ ಜಯತೀರ್ಥ ಕಟ್ಟಿ, ಡಾ|| ಎ.ಹೆಚ್. ಶಿವಯೋಗಿಸ್ವಾಮಿ, ವಿಧಾನಪರಿಷತ್ ಸದಸ್ಯ ಮತ್ತು ಬೆಂಗಳೂರು ವಿಭಾಗ ಪ್ರಭಾರಿ ಹೆಚ್.ಎಸ್. ಗೋಪಿನಾಥ್ ರೆಡ್ಡಿ ಅವರು ಭಾಗವಹಿಸಿದ್ದರು.
ಸಾಂಸ್ಕೃತಿಕ ಪ್ರಕೋಷ್ಠದ ವತಿಯಿಂದ ಬೆಳಿಗ್ಗೆ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು. ನಗರಕ್ಕೆ ಬರುವ ಕಾರ್ಯಕರ್ತರಿಗೆ ಸೂಕ್ತ ವ್ಯವಸ್ಥೆಗಳನ್ನು ಮಾಡಲಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.