News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸಶಸ್ತ್ರ ಪಡೆಗಳನ್ನು ಕಾಂಗ್ರೆಸ್ ನಿರುತ್ಸಾಹಗೊಳಿಸುತ್ತಿದೆ: ಬಿಜೆಪಿ

ನವದೆಹಲಿ: ರಾಜ್ಯಸಭೆಯಲ್ಲಿ ಚೀನಾದ ಬಗ್ಗೆ ಚರ್ಚೆಗೆ ಆಗ್ರಹಿಸಿ ಹಲವು ಪಕ್ಷಗಳು ಸದನದಿಂದ ಹೊರನಡೆದ ಪ್ರತಿಪಕ್ಷಗಳ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ.

ವಿಶೇಷವಾಗಿ ಕಾಂಗ್ರೆಸ್‌ ಪಕ್ಷವು ಪ್ರತಿಬಂಧಕ ಧೋರಣೆ ಅನುಸರಿಸುತ್ತಿದೆ ಎಂದಿರುವ ಬಿಜೆಪಿ , ರಾಷ್ಟ್ರೀಯ ಭದ್ರತೆಯಂತಹ ಸೂಕ್ಷ್ಮ ವಿಷಯವನ್ನು ರಾಜಕೀಯಗೊಳಿಸಬೇಡಿ ಎಂದು ಕರೆ ನೀಡಿದೆ.

2004 ಮತ್ತು 2014 ರ ನಡುವೆ ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರದಲ್ಲಿದ್ದಾಗ ಸಂಸತ್ತಿನಲ್ಲಿ  ಸೂಕ್ಷ್ಮ ವಿಷಯಗಳ ಬಗ್ಗೆ ಚರ್ಚೆ ಅಥವಾ ಸ್ಪಷ್ಟೀಕರಣವನ್ನು ಅನುಮತಿಸದ ಹಲವಾರು ನಿದರ್ಶನಗಳಿವೆ ಎಂದು ರಾಜ್ಯಸಭೆಯ ಸಭಾನಾಯಕ ಮತ್ತು ಬಿಜೆಪಿಯ ಹಿರಿಯ ನಾಯಕ ಪಿಯೂಷ್ ಗೋಯಲ್ ಹೇಳಿದ್ದಾರೆ.

ಸಂಸತ್ತಿನ ನಿಯಮಗಳು ಮತ್ತು ನಿಬಂಧನೆಗಳನ್ನು ಗೌರವಿಸುವುದನ್ನು ಅಥವಾ ಸಭಾಪತಿಯ ತೀರ್ಪುಗಳಿಗೆ ಯಾವುದೇ ಗಮನ ಕೊಡುವುದನ್ನು ನಿಲ್ಲಿಸಿರುವ ಪ್ರತಿಪಕ್ಷಗಳ ಹತಾಶೆ ಅಂತಹ ಮಟ್ಟವನ್ನು ತಲುಪಿರುವುದು ದುರದೃಷ್ಟಕರವಾಗಿದೆ ಎಂದಿದ್ದಾರೆ.

ಕಾಂಗ್ರೆಸ್, ವಿಶೇಷವಾಗಿ, ಅತ್ಯಂತ ಕೀಳು ಮಟ್ಟದ ರಾಜಕೀಯವನ್ನು ಆಶ್ರಯಿಸುತ್ತಿದೆ ಎಂದು ಗೋಯಲ್ ಹೇಳಿದ್ದಾರೆ.

ದೇಶವು ಒಂದೇ ಧ್ವನಿಯಲ್ಲಿ ಮಾತನಾಡುವ ಮತ್ತು ಯೋಧರ ಶೌರ್ಯಕ್ಕಾಗಿ ಅವರನ್ನು ಪ್ರೋತ್ಸಾಹಿಸುವ ಮತ್ತು ಶ್ಲಾಘಿಸಬೇಕಾದ ಸಮಯದಲ್ಲಿ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಸಶಸ್ತ್ರ ಪಡೆಗಳನ್ನು ನಿರುತ್ಸಾಹಗೊಳಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

“ಗಡಿ ವಿಷಯ ಭಾರತದ, ಅದರ ಪ್ರಜಾಪ್ರಭುತ್ವದ ಮತ್ತು ಪ್ರತಿಯೊಬ್ಬರ ಹಿತಾಸಕ್ತಿಯಾಗಿದೆ. ರಾಷ್ಟ್ರೀಯ ಭದ್ರತೆಯಂತಹ ಸೂಕ್ಷ್ಮ ವಿಷಯವನ್ನು ರಾಜಕೀಯಗೊಳಿಸಬಾರದು ಮತ್ತು ಸಂಸತ್ತು ಕಾರ್ಯನಿರ್ವಹಿಸಲು ಅವಕಾಶ ನೀಡಬೇಕು” ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top