News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್‌ನಿಂದ ‌ವೀರ ಸಾವರ್ಕರ್‌ ಹೆಸರು ಬಳಕೆ: ರಂಜಿತ್‌ ಸಾವರ್ಕರ್

ನವದೆಹಲಿ: ಕರ್ನಾಟಕದ ಸುವರ್ಣಸೌಧದ ಹಾಲ್‌ನಲ್ಲಿ ಇಂದು ವೀರ್ ಸಾವರ್ಕರ್ ಅವರ ಚಿತ್ರವನ್ನು ಅನಾವರಣಗೊಳಿಸಿದ ಬಳಿಕ ಹೊಸ ವಿವಾದವೊಂದು ಭುಗಿಲೆದ್ದಿದೆ. ಈ ಕ್ರಮದಿಂದ ಆಕ್ರೋಶಗೊಂಡ ಕಾಂಗ್ರೆಸ್ ಸದಸ್ಯರು ಜವಾಹರಲಾಲ್ ನೆಹರು, ವಾಲ್ಮೀಕಿ, ಬಸವಣ್ಣ, ಕನಕದಾಸ, ಬಿಆರ್ ಅಂಬೇಡ್ಕರ್, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರದೊಂದಿಗೆ ವಿಧಾನಸಭೆಯೊಳಗೆ ಧರಣಿ ನಡೆಸಿದ್ದಾರೆ.

ಪ್ರತಿಪಕ್ಷಗಳ ಆಕ್ರೋಶಕ್ಕೆ  ವೀರ್ ಸಾವರ್ಕರ್ ಅವರ ಮೊಮ್ಮಗ ರಂಜಿತ್ ಸಾವರ್ಕರ್ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು ಮತ್ತು ಕಾಂಗ್ರೆಸ್ ಸದಸ್ಯರು ರಾಜಕೀಯ ಲಾಭಕ್ಕಾಗಿ ಸಾವರ್ಕರ್ ಮೇಲೆ ವಾಗ್ದಾಳಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.‌

“ಕಾಂಗ್ರೆಸ್ ತನ್ನ ಅಧಿಕಾರವನ್ನು ಕಳೆದುಕೊಂಡ ನಂತರ ಸಾವರ್ಕರ್ ಹೆಸರನ್ನು ತಮ್ಮ ರಾಜಕೀಯ ಲಾಭಕ್ಕಾಗಿ ಪದೇ ಪದೇ ಬಳಸುತ್ತಿದೆ, ಇಂದಿರಾ ಗಾಂಧಿ ಆಡಳಿತದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಅವರು ಸಾವರ್ಕರ್ ಅವರನ್ನು ಗೌರವಿಸಿದ್ದರು ಎಂಬುದು ದಾಖಲೆಯ ವಿಷಯವಾಗಿದೆ. ಆದರೀಗ ಅವರು ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಕಾರಣಕ್ಕಾಗಿ ಸಾವರ್ಕರ್ ಅವರನ್ನು ದೂಷಿಸುತ್ತಿದ್ದಾರೆ” ಎಂದಿದ್ದಾರೆ.

ರಂಜಿತ್ ಸಾವರ್ಕರ್ ಅವರು ತಮ್ಮ ತಾತ ಭಾರತದ ವಿಭಜನೆಯ ಬೆಂಬಲಿಗರಾಗಿದ್ದರು ಎಂಬ ಕಾಂಗ್ರೆಸ್ ಹೇಳಿಕೆಗಳನ್ನು ತಳ್ಳಿಹಾಕಿದರು. ಭಾರತದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು ಲೂಯಿಸ್ ಮೌಂಟ್ ಬ್ಯಾಟನ್ ಅವರ ವಿಭಜನೆಯ ಯೋಜನೆಯನ್ನು ಏಕೆ ಒಪ್ಪಿಕೊಂಡರು ಎಂದು ಪ್ರಶ್ನಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top