News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಇಂದು ಸಂಸತ್ತಿನಲ್ಲಿ ಸಂಸದರಿಗಾಗಿ ʼಸಿರಿಧಾನ್ಯʼ ಖಾದ್ಯಗಳು

ನವದೆಹಲಿ: ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷದ ಪ್ರಯುಕ್ತ ಇಂದು ಸಂಸತ್ತಿನಲ್ಲಿ ಎಲ್ಲಾ ಸಂಸದರಿಗೂ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ‘ಸಿರಿಧಾನ್ಯ’ ಖಾದ್ಯಗಳನ್ನು ಉಣ ಬಡಿಸಿದ್ದಾರೆ.

ಕರ್ನಾಟಕದ ರಾಗಿ ದೋಸೆ ಮತ್ತು ಜೋಳದ ರೊಟ್ಟಿ ಊಟವನ್ನು ಸಂಸದರಿಗಾಗಿ ತಯಾರಿಸಲಾಗಿದೆ, ಇದಕ್ಕಾಗಿ ಕರ್ನಾಟಕದಿಂದ  ಬಾಣಸಿಗರನ್ನು ಕರೆಸಿಕೊಳ್ಳಲಾಗಿದೆ. ಸಿರಿಧಾನ್ಯಗಳಿಂದ ತಯಾರಾದ ದೋಸೆ, ಇಡ್ಲಿ, ರಾಗಿ ಹಾಗೂ ಜೋಳದ ರೊಟ್ಟಿ, ಸಜ್ಜೆ ಹಾಗೂ ಜೋಳದ ಕಿಚಡಿ ಮತ್ತು ಸಜ್ಜೆ ಪಾಯಸವನ್ನು ತಯಾರು ಮಾಡಿದ್ದಾರೆ.

ಅತ್ಯುತ್ತಮ ಪೋಷಕಾಂಶ ಹೊಂದಿರುವ ಸಿರಿಧಾನ್ಯಗಳ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಖಾದ್ಯಗಳನ್ನು ತಯಾರಿಸಲಾಗಿದೆ.

ಪ್ರಧಾನಿ ಮೋದಿ ಅವರ ಶಿಫಾರಸ್ಸಿನ ಮೇಲೆ 2023ನೇ ವರ್ಷವನ್ನು ವಿಶ್ವಸಂಸ್ಥೆ ‘ಸಿರಿಧಾನ್ಯ ವರ್ಷ’ ಎಂದು ಘೋಷಿಸಿದೆ. ಸರ್ಕಾರವು ಸಹ ಸಿರಿಧಾನ್ಯ ಸೇವನೆಗೆ ಹೆಚ್ಚು ಒತ್ತು ನೀಡಿದ್ದು, ಇದನ್ನು ಪೋಷಣ್‌ ಮಿಶನ್‌ ಆಂದೋಲನದಲ್ಲಿ ಸೇರಿಸಿದೆ.

ಭಾರತ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಮಿಷನ್ ಅಡಿಯಲ್ಲಿ ರಾಗಿಯನ್ನು ಪೌಷ್ಟಿಕ ಧಾನ್ಯವಾಗಿ ಸೇರಿಸಿದೆ, ಇದನ್ನು ದೇಶದ 14 ರಾಜ್ಯಗಳ 212 ಜಿಲ್ಲೆಗಳಲ್ಲಿ ಜಾರಿಗೊಳಿಸಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top