News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜಗತ್ತಿನಲ್ಲಿ ಮತ್ತೆ ಕೋವಿಡ್‌ ಉಲ್ಭಣ: ಭಾರತದಲ್ಲೂ ಹೆಚ್ಚಿದ ಆತಂಕ

ನವದೆಹಲಿ: ಕಳೆದ ಒಂದು ವರ್ಷಗಳಿಂದ ಕಡಿಮೆಯಾಗಿದ್ದ ಕೊರೋನಾ ಸೋಂಕು ಇದೀಗ ಜಗತ್ತಿನಾದ್ಯಂತ ಮತ್ತೆ ಉಲ್ಬಣಗೊಳ್ಳುತ್ತಿದೆ. ಅಮೆರಿಕಾ, ಚೀನಾ, ಬ್ರೆಜಿಲ್ ಮತ್ತು ದಕ್ಷಿಣ ಕೊರಿಯಾದಲ್ಲಿ ಮಹಾಮಾರಿ ಕೊರೋನಾ ಹೆಚ್ಚಾಗುತ್ತಿದ್ದು, ಭಾರತದಲ್ಲೂ ಆತಂಕವನ್ನು ಸೃಷ್ಟಿಸಿದೆ.

ದೇಶದ ಕೊರೋನಾ ಸೋಂಕಿನ ಪರಿಸ್ಥಿತಿ ಪರಿಶೀಲಿಸಲು ಆರೋಗ್ಯ ಸಚಿವಾಲಯವು ಇಂದು ಸಭೆ ನಡೆಸುತ್ತಿದೆ.

ಪಾಸಿಟಿವ್ ಮಾದರಿಗಳ ಜೀನೋಮ್ ಅನುಕ್ರಮ ಪ್ರಕ್ರಿಯೆಯನ್ನು ಬಲಪಡಿಸಲು ಮತ್ತು ಹೊಸ ರೂಪಾಂತರಗಳ ಬಗ್ಗೆ ನಿಗಾ ಇಡುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ‌ ನಿನ್ನೆಯಷ್ಟೇ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಸೂಚನೆಗಳನ್ನು ನೀಡಿದ್ದಾರೆ.

ಅಲ್ಲದೇ ಇಂದು ಅಂತರಾಷ್ಟ್ರೀಯ ಪರಿಸ್ಥಿತಿಗಳನ್ನು ಚರ್ಚಿಸಲು ಅವರು ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು, ದೇಶದಲ್ಲಿ ಪತ್ತೆಯಾಗುವ ಹೊಸ ರೂಪಾಂತರಗಳನ್ನು ಸಮಯೋಚಿತವಾಗಿ ನಿಯಂತ್ರಿಸಲು ಮತ್ತು ಅಗತ್ಯ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಕೈಗೊಳ್ಳಲು ಮಹತ್ವದ ಕ್ರಮಗಳಿಂದ ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ.

ಟೆಸ್ಟ್-ಟ್ರ್ಯಾಕ್-ಟ್ರೀಟ್-ವ್ಯಾಕ್ಸಿನೇಷನ್ ಮತ್ತು ಕೋವಿಡ್-ಸೂಕ್ತ ನಡವಳಿಕೆ ಕಾರ್ಯತಂತ್ರದ ಮೇಲೆ ಭಾರತ ತನ್ನ ಗಮನವನ್ನು ಕೇಂದ್ರೀಕರಿಸಿದ್ದು, ಕೊರೋನಾ ವೈರಸ್ ಹರಡುವಿಕೆಯನ್ನು ನಿರ್ಬಂಧಿಸಲು ಸಮರ್ಥವಾಗಿದೆ. ದೇಶದಲ್ಲಿ ಪ್ರಸ್ತುತ 1,200 ಪ್ರಕರಣಗಳು ವರದಿಯಾಗುತ್ತಿವೆ ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top