News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ದೇಶದಲ್ಲಿ 650 ಏಕಲವ್ಯ ಮಾದರಿ ವಸತಿ ಶಾಲೆಗಳ ನಿರ್ಮಾಣ

ನವದೆಹಲಿ: ಕಳೆದ ಎಂಟು ವರ್ಷಗಳಲ್ಲಿ ದೇಶದಲ್ಲಿ ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗೆ ಸರ್ಕಾರ ಹಲವಾರು ಉಪಕ್ರಮಗಳನ್ನು ಕೈಗೊಂಡಿದೆ ಎಂದು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಸುದ್ದಿ ಸಂಸ್ಥೆಗಳೊಂದಿಗೆ ಮಾತನಾಡಿದ ಪ್ರಧಾನ್, ಬುಡಕಟ್ಟು ಸಮುದಾಯಗಳ ಅಭಿವೃದ್ಧಿಗೆ 2014 ರ ಮೊದಲು ಕೇವಲ 19 ಸಾವಿರ ಕೋಟಿ ರೂಪಾಯಿಗಳನ್ನು ವ್ಯಯಿಸಲಾಗಿತ್ತು, ಈಗ ಅದು 91 ಸಾವಿರ ಕೋಟಿ ರೂಪಾಯಿಗಳನ್ನು ಮುಟ್ಟಿದೆ. 2014ರ ಹಿಂದೆ 3,800 ಕೋಟಿ ರೂ.ಗೆ ಹೋಲಿಸಿದರೆ ಬುಡಕಟ್ಟು ವ್ಯವಹಾರಗಳ ಇಲಾಖೆಗೆ ಬಜೆಟ್ 8‌,500 ಕೋಟಿ ರೂ.ಗೆ ಏರಿಕೆಯಾಗಿದೆ ಎಂದು ಮಾಹಿತಿ ನೀಡಿದರು.

ಬುಡಕಟ್ಟು ಪ್ರದೇಶಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಸರ್ಕಾರವು 29 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ 650 ಏಕಲವ್ಯ ಮಾದರಿ ವಸತಿ ಶಾಲೆಗಳನ್ನು ನಿರ್ಮಿಸಿದೆ ಎಂದು ಸಚಿವರು ಹೇಳಿದರು.

ಪ್ರಧಾನ ಮಂತ್ರಿ ಜನ್ ಧನ್ ಯೋಜನೆ, ಸಾಂಪ್ರದಾಯಿಕ ಕೈಗಾರಿಕೆಗಳ ಪುನರುತ್ಪಾದನೆಗಾಗಿ ನಿಧಿಯ ಯೋಜನೆ ಮತ್ತು ಬುಡಕಟ್ಟು ಪ್ರದೇಶಗಳಲ್ಲಿ ಉದ್ಯೋಗ ಸೃಷ್ಟಿಸಲು ಮತ್ತು ಸ್ವಯಂ ಉದ್ಯೋಗವನ್ನು ಉತ್ತೇಜಿಸಲು ಹಲವಾರು ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ ಎಂದು  ಪ್ರಧಾನ್ ಅವರು ಹೇಳಿದರು.

ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಪ್ರಯೋಜನಗಳ ಕುರಿತು ಮಾತನಾಡಿದ  ಪ್ರಧಾನ್, ಮಾತೃಭಾಷೆ ಮತ್ತು ಸ್ಥಳೀಯ ಭಾಷೆಯಲ್ಲಿ ಶಿಕ್ಷಣವನ್ನು ನೀಡುವತ್ತ ಗಮನಹರಿಸಿರುವುದರಿಂದ ಹೊಸ ನೀತಿಯು ಬುಡಕಟ್ಟು ಸಮುದಾಯಗಳಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಹೇಳಿದರು.

2023ನೇ ವರ್ಷವನ್ನು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವನ್ನಾಗಿ ಘೋಷಿಸಲಾಗಿದ್ದು, ಈ ಉತ್ಪನ್ನಗಳಿಂದ ಬುಡಕಟ್ಟು ಜನಾಂಗದವರಿಗೆ ಹೆಚ್ಚಿನ ಲಾಭವಾಗಲಿದೆ ಎಂದು ಶಿಕ್ಷಣ ಸಚಿವರು ತಿಳಿಸಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top