News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೋವಿಡ್‌ ಆತಂಕ: ಉನ್ನತ ಮಟ್ಟದ ಸಭೆ ನಡೆಸಿದ ಕೇಂದ್ರ ಆರೋಗ್ಯ ಸಚಿವ

ನವದೆಹಲಿ: ವಿಶ್ವದಾದ್ಯಂತ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಕುರಿತು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಇಂದು ರಾಷ್ಟ್ ರಾಜಧಾನಿಯಲ್ಲಿ ಉನ್ನತ ಮಟ್ಟದ ಸಭೆಯನ್ನು ನಡೆಸಿದರು

“ವಾಯುಯಾನಕ್ಕೆ ಸಂಬಂಧಿಸಿದಂತೆ ಸದ್ಯಕ್ಕೆ ಯಾವುದೇ ಬದಲಾವಣೆ ಇಲ್ಲ, ನೀವು ಕಿಕ್ಕಿರಿದ ಜಾಗದಲ್ಲಿ, ಒಳಾಂಗಣ ಅಥವಾ ಹೊರಾಂಗಣದಲ್ಲಿದ್ದರೆ ಮಾಸ್ಕ್ ಬಳಸಿ. ಕೊಮೊರ್ಬಿಡಿಟಿ ಹೊಂದಿರುವ ಅಥವಾ ಹಿರಿಯ ವಯಸ್ಸಿನವರಿಗೆ ಇದು ಹೆಚ್ಚು ಮುಖ್ಯ” ಎಂದು ನೀತಿ ಆಯೋಗದ ಸದಸ್ಯ ಡಾ ವಿಕೆ ಪಾಲ್  ಅವರು ಕೋವಿಡ್ ಕುರಿತ ಕೇಂದ್ರ ಆರೋಗ್ಯ ಸಚಿವರ ಸಭೆಯ ನಂತರ ಹೇಳಿದರು

“ಕೇವಲ 27-28% ಜನರು ಮುನ್ನೆಚ್ಚರಿಕೆ ಡೋಸ್‌ ಅನ್ನು ತೆಗೆದುಕೊಂಡಿದ್ದಾರೆ. ಮುನ್ನೆಚ್ಚರಿಕೆ ಡೋಸ್ ತೆಗೆದುಕೊಳ್ಳಲು ನಾವು ಇತರರಿಗೆ, ವಿಶೇಷವಾಗಿ ಹಿರಿಯ ನಾಗರಿಕರಿಗೆ ಮನವಿ ಮಾಡುತ್ತೇವೆ. ಮುನ್ನೆಚ್ಚರಿಕೆ ಡೋಸ್ ಕಡ್ಡಾಯಗೊಳಿಸಲಾಗಿದೆ ಮತ್ತು ಎಲ್ಲರಿಗೂ‌ ಈ ಬಗ್ಗೆ ಮಾರ್ಗದರ್ಶನ ನೀಡಲಾಗುತ್ತದೆ” ಎಂದಿದ್ದಾರೆ.

ಸಭೆಯ ನಂತರ ಟ್ವಿಟ್‌ ಮಾಡಿದ ಮಾಂಡವೀಯಾ ಅವರು,”ಕೆಲವು ದೇಶಗಳಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು, ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಇಂದು ಪರಿಸ್ಥಿತಿಯನ್ನು ಪರಿಶೀಲಿಸಿದ್ದೇವೆ. ಕೋವಿಡ್ ಇನ್ನೂ ಮುಗಿದಿಲ್ಲ. ನಾನು ಎಲ್ಲರನ್ನು ಎಚ್ಚರಿಕೆಯಿಂದ ಇರುವಂತೆ ಮತ್ತು ಕಣ್ಗಾವಲು ಬಲಪಡಿಸುವಂತೆ ಸೂಚಿಸಿದ್ದೇನೆ. ನಾವು ಯಾವುದೇ ಪರಿಸ್ಥಿತಿಯನ್ನು ನಿರ್ವಹಿಸಲು ಸಿದ್ಧರಿದ್ದೇವೆ” ಎಂದಿದ್ದಾರೆ.

ಜಪಾನ್, ಯುಎಸ್ಎ, ಕೊರಿಯಾ, ಬ್ರೆಜಿಲ್ ಮತ್ತು ಚೀನಾದಲ್ಲಿ ಹಠಾತ್ ಪ್ರಕರಣಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ, ಭಾರತೀಯ SARS-CoV-2 ಜೀನೋಮಿಕ್ಸ್ ಕನ್ಸೋರ್ಟಿಯಂ (INSACOG) ಮೂಲಕ ರೂಪಾಂತರಗಳನ್ನು ಪತ್ತೆಹಚ್ಚಲು ಪಾಸಿಟಿವ್ ಪ್ರಕರಣದ ಮಾದರಿಗಳ ಸಂಪೂರ್ಣ ಜೀನೋಮ್ ಅನುಕ್ರಮವನ್ನು ಸಜ್ಜುಗೊಳಿಸುವುದು ಅತ್ಯಗತ್ಯ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top