ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ನೂತನ ಸಭಾಪತಿಗಳಾಗಿ ಆಯ್ಕೆಯಾದ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಅನೇಕ ಗಣ್ಯರು ಅಭಿನಂದನೆಗಳನ್ನು ತಿಳಿಸಿದ್ದಾರೆ.
“ಕರ್ನಾಟಕ ವಿಧಾನ ಪರಿಷತ್ತಿನ ನೂತನ ಸಭಾಪತಿಗಳಾಗಿ ಆಯ್ಕೆಯಾದ ಪರಿಷತ್ತಿನ ಅತ್ಯಂತ ಅನುಭವಿ & ಹಿರಿಯ ಸದಸ್ಯ ಶ್ರೀ ಬಸವರಾಜ್ ಹೊರಟ್ಟಿ ಅವರಿಗೆ ಹಾರ್ದಿಕ ಅಭಿನಂದನೆಗಳು. ಸಭಾಪತಿ ಪೀಠದ ಹಿರಿಮೆ, ಗರಿಮೆಗಳನ್ನು ಎತ್ತಿ ಹಿಡಿಯುವ ಜೊತೆಗೆ ಅತ್ಯಂತ ಸುಗಮವಾದ ರೀತಿಯಲ್ಲಿ ಕಲಾಪವನ್ನು ಮುಂದುವರೆಸಿಕೊಂಡು ಹೋಗುತ್ತಿರೆಂಬ ಅದಮ್ಯ ವಿಶ್ವಾಸ ನಮ್ಮಲ್ಲಿದೆ” ಎಂದು ಸಿಎಂ ಟ್ವಿಟ್ ಮಾಡಿದ್ದಾರೆ.
ಕರ್ನಾಟಕ ವಿಧಾನ ಪರಿಷತ್ತಿನ ನೂತನ ಸಭಾಪತಿಗಳಾಗಿ ಆಯ್ಕೆಯಾದ ಬಸವರಾಜ್ ಹೊರಟ್ಟಿ ಅವರಿಗೆ ಅಭಿನಂದನೆ ಮತ್ತು ಶುಭ ಕೋರುವುದಾಗಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ಬಸವರಾಜ ಹೊರಟ್ಟಿ ಅವರು ಪರಿಷತ್ತಿನ ಅತ್ಯಂತ ಹಿರಿಯ- ಅನುಭವಿ ಸದಸ್ಯರಾಗಿದ್ದಾರೆ. ಅವರು ಸಭಾಪತಿ ಪೀಠದ ಹಿರಿಮೆ, ಗರಿಮೆಗಳನ್ನು ಎತ್ತಿ ಹಿಡಿದು ಅತ್ಯಂತ ಸಮರ್ಥ ರೀತಿಯಲ್ಲಿ ಕಲಾಪವನ್ನು ಮುಂದುವರೆಸಿಕೊಂಡು ಹೋಗುವರೆಂಬ ವಿಶ್ವಾಸವನ್ನು ನಳಿನ್ ಕುಮಾರ್ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ವಿಧಾನ ಪರಿಷತ್ತಿನ ನೂತನ ಸಭಾಪತಿಗಳಾಗಿ ಆಯ್ಕೆಯಾದ,ಪರಿಷತ್ತಿನ ಅತ್ಯಂತ ಅನುಭವಿ & ಹಿರಿಯ ಸದಸ್ಯ ಶ್ರೀ ಬಸವರಾಜ್ ಹೊರಟ್ಟಿ ಅವರಿಗೆ ಹಾರ್ದಿಕ ಅಭಿನಂದನೆಗಳು. ಸಭಾಪತಿ ಪೀಠದ ಹಿರಿಮೆ,ಗರಿಮೆಗಳನ್ನು ಎತ್ತಿ ಹಿಡಿಯುವ ಜೊತೆಗೆ ಅತ್ಯಂತ ಸುಗಮವಾದ ರೀತಿಯಲ್ಲಿ ಕಲಾಪವನ್ನು ಮುಂದುವರೆಸಿಕೊಂಡು ಹೋಗುತ್ತಿರೆಂಬ ಅದಮ್ಯ ವಿಶ್ವಾಸ ನಮ್ಮಲ್ಲಿದೆ. pic.twitter.com/vwQWfewrMs
— Basavaraj S Bommai (@BSBommai) December 21, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.