News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸು: ಸಿಎಂ ಘೋಷಣೆ

ಬೆಳಗಾವಿ:   ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸುಗಳ ಪ್ರಾರಂಭಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮುಂದಿನ ಶೈಕ್ಷಣಿಕ ವರ್ಷದಿಂದ  ಯೋಗದೊಂದಿಗೆ ಆತ್ಮರಕ್ಷಣೆಗಾಗಿ ಅಲ್ಪಾವಧಿ ಕೋರ್ಸ್ ಆರಂಭಿಸಲಿದ್ದೇವೆ ಎಂದಿದ್ದಾರೆ.

ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಓಬವ್ವ ಆತ್ಮರಕ್ಷಣಾ ಕಲೆ ಕರಾಟೆ ಪ್ರದರ್ಶನದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.

ಎಲ್ಲಾ ಶಿಕ್ಷಣ ಸಂಸ್ಥೆಗಳು ಅಲ್ಪಾವಧಿ ಕೋರ್ಸುಗಳನ್ನು ಕಲಿಸುವ ಅವಶ್ಯಕತೆ ಇದೆ.  ಮುಂದಿನ ಶೈಕ್ಷಣಿಕ ವರ್ಷದಿಂದ ಯೋಗದೊಂದಿಗೆ  ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸುಗಳನ್ನು ಕೂಡ ಪಿಯುಸಿ ಹಂತದಿಂತ ಆರಂಭಿಸಲಾಗುವುದು ಎಂದಿದ್ದಾರೆ.

ಆತ್ಮರಕ್ಷಣೆ ಪ್ರತಿ ನಾಗರಿಕನಿಗೆ  ಅಗತ್ಯ. ಸುರಕ್ಷಿತ ಸಮಾಜ ನಿರ್ಮಾಣಕ್ಕೆ ಆತ್ಮರಕ್ಷಣಾ ಕಲೆ ಅಗತ್ಯ: ಆತ್ಮರಕ್ಷಣಾ ಕಲೆ ಕಲಿತವರು ಇತರ ಹೆಣ್ಣುಮಕ್ಕಳಿಗೆ ಈ ತರಬೇತಿ ನೀಡಬೇಕು. ಗ್ರಾಮೀಣ ಮಹಿಳೆಯರು, ದುಡಿಯುವ ಮಹಿಳೆಯರು, ಶಾಲಾ ಕಾಲೇಜುಗಳ ವಿದ್ಯಾರ್ಥಿನಿಯರು, ಸಹೋದರಿಯರಿಗೆ ಈ ವಿದ್ಯೆ ಕಲಿಸಿದರೆ, ದೊಡ್ಡ ಪ್ರಮಾಣದಲ್ಲಿ ಇದನ್ನು ವಿಸ್ತರಿಸಬಹುದು. ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆ ಕಲೆ ತಿಳಿದಿದ್ದರೆ, ಹೆಣ್ಣು ಮಕ್ಕಳಿಗೆ ಹಾಗೂ ಸಮಾಜಕ್ಕೂ ಸುರಕ್ಷತೆ ನೀಡುತ್ತದೆ. ಸುರಕ್ಷಿತ ಸಮಾಜ ನಿರ್ಮಾಣವಾಗಲು ಇದು ಅಗತ್ಯ ಎಂದು ಸಿಎಂ ಪ್ರತಿಪಾದಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top