News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ʼಒಂದು ರಾಷ್ಟ್ರ- ಒಂದು ಪಡಿತರ ಚೀಟಿ” ಸಾಮಾನ್ಯ ಜನರ ಶಕ್ತಿ: ಕೃಷಿ ಸಚಿವ

ನವದೆಹಲಿ: “ಒಂದು ರಾಷ್ಟ್ರ ಒಂದು ಪಡಿತರ ಚೀಟಿ” ಸಾಮಾನ್ಯ ಜನರ ಶಕ್ತಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಹೇಳಿದ್ದಾರೆ.

“ಒಂದು ರಾಷ್ಟ್ರ-ಒಂದು ಪಡಿತರ ಚೀಟಿಯ ಮಹತ್ವಾಕಾಂಕ್ಷೆಯ ಯೋಜನೆಯು ದೇಶಾದ್ಯಂತದ ಬಡವರಿಗೆ ಬಹಳಷ್ಟು ಪ್ರಯೋಜನವನ್ನು ತಂದಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಮೂಲಕ ಕೇಂದ್ರ ಸರ್ಕಾರವು ಬಡವರಿಗೆ ರೂ. 3.90 ಲಕ್ಷ ಕೋಟಿಯ ಉಚಿತ ಆಹಾರ ಧಾನ್ಯಗಳನ್ನು ಒದಗಿಸಿದೆ” ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ರೈತರ ಕಲ್ಯಾಣಕ್ಕೆ ತಮ್ಮ ಬದ್ಧತೆಯನ್ನು ಒತ್ತಿಹೇಳಿದ ಅವರು, ಸರ್ಕಾರವು 2021-22 ರಲ್ಲಿ ಎಂಎಸ್‌ಪಿ ಮೇಲೆ 2.75 ಲಕ್ಷ ಕೋಟಿ ರೂಪಾಯಿಗಳ ದಾಖಲೆಯ ಖರೀದಿಯನ್ನು ಮಾಡಿದೆ ಎಂದಿದ್ದಾರೆ.

ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಕೃಷಿ ಸಚಿವಾಲಯಕ್ಕೆ ಸಂಬಂಧಿಸಿದ ಸಾಧನೆಗಳನ್ನು ಉಲ್ಲೇಖಿಸಿದ ತೋಮರ್, ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಉಂಟಾದ ಆರ್ಥಿಕ ಅಡಚಣೆಯಿಂದಾಗಿ ಬಡವರು ಎದುರಿಸುತ್ತಿರುವ ಸಂಕಷ್ಟಗಳನ್ನು ನಿವಾರಿಸಲು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಪ್ರಾರಂಭಿಸಲಾಗಿದೆ ಎಂದು ಹೇಳಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top