ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯ ವಿರುದ್ಧ ಮೆಗಾ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ನಿನ್ನೆ ಬಂಡಿಪೋರಾ ಪೊಲೀಸರು 26 ಎಆರ್ ಮತ್ತು ಸಿಆರ್ಪಿಎಫ್ನೊಂದಿಗೆ ಜಂಟಿ ಶೋಧ ನಡೆಸಿ ಎಲ್ಇಟಿಯ ಇಬ್ಬರು ಭಯೋತ್ಪಾದಕರನ್ನು ಬಂಧಿಸಿದ್ದಾರೆ.
ಬಂಧಿತ ಉಗ್ರರನ್ನು ಇಮಾದ್ ಅಮೀನ್ ಚೋಪಾನ್ ಮತ್ತು ತಾಹಿರ್ ಅಹ್ ಭಟ್ ಎಂದು ಗುರುತಿಸಲಾಗಿದೆ. ಅವರಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಾಶ್ಮೀರ ಪೊಲೀಸರ ಪ್ರಕಾರ, ಇಬ್ಬರೂ ಭಯೋತ್ಪಾದಕರು ಬಂಡಿಪೋರಾದಿಂದ ಶ್ರೀನಗರದ ಕಡೆಗೆ ಪ್ರಯಾಣಿಸುತ್ತಿದ್ದಾಗ ಅವರನ್ನು ಬಂಧಿಸಲಾಗಿದೆ. ಅವರ ವಶದಿಂದ ಒಂದು ಚೈನೀಸ್ ಪಿಸ್ತೂಲ್ ಮತ್ತು ಮ್ಯಾಗಜೀನ್ಗಳು ಮತ್ತು ಗುಂಡುಗಳು, ಚೀನಾದ ಗ್ರೆನೇಡ್ ಮತ್ತು ಡಿಟೋನೇಟರ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ನಾರ್ಕೋ ಭಯೋತ್ಪಾದನೆಯನ್ನು ತೊಡೆದುಹಾಕುವ ನಿಟ್ಟಿನಲ್ಲೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸಕ್ರಿಯರಾಗಿದ್ದು, ಇಂದು ಕುಪ್ವಾರ ಮತ್ತು ಬಾರಾಮುಲ್ಲಾ ಜಿಲ್ಲೆಗಳ ವಿವಿಧ ಪ್ರದೇಶಗಳಿಂದ ಐದು ಪೊಲೀಸರು, ಒಬ್ಬ ರಾಜಕೀಯ ಕಾರ್ಯಕರ್ತ, ಗುತ್ತಿಗೆದಾರ ಮತ್ತು ಅಂಗಡಿಯವ ಸೇರಿದಂತೆ 17 ಜನರನ್ನು ಬಂಧಿಸಲಾಗಿದೆ. ಅವರ ಬಳಿ ಮಾದಕ ದ್ರವ್ಯ ಇದೆ ಎಂಬುದು ತಿಳಿದು ಬಂದ ಬಳಿಕ ಅವರನ್ನು ಬಂಧಿಸಲಾಗಿದೆ.
#BREAKING | Mega recovery by Kashmir police: Chinese pistol along with magazine & rounds, Chinese Grenade & detonators recovered; probe underway. Tune in – https://t.co/bn2E9Q0XKX pic.twitter.com/hOyXVLMDb6
— Republic (@republic) December 24, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.