ನವದೆಹಲಿ: ತಮ್ಮ ನಂಬಿಕೆಯ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದ ಗುರು ಗೋಬಿಂದ್ ಸಿಂಗ್ ಅವರ ಪುತ್ರರಾದ ಜೋರಾವರ್ ಸಿಂಗ್ ಮತ್ತು ಫತೇ ಸಿಂಗ್ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಜೋರಾವರ್ ಸಿಂಗ್ ಮತ್ತು ಫತೇ ಸಿಂಗ್ ಹುತಾತ್ಮರಾದ ದಿನವನ್ನು ‘ವೀರ್ ಬಾಲ್ ದಿವಸ್’ ಎಂದು ಆಚರಿಸಲಾಗುತ್ತದೆ. ಈ ವರ್ಷ ಜನವರಿ 9 ರಂದು ಗುರು ಗೋಬಿಂದ್ ಸಿಂಗ್ ಅವರ ಜನ್ಮದಿನವನ್ನು ಆಚರಿಸಿದ ಸಂದರ್ಭದಲ್ಲಿ, ಡಿಸೆಂಬರ್ 26 ಅನ್ನು ‘ವೀರ್ ಬಾಲ್ ದಿವಸ್’ ಎಂದು ಆಚರಿಸಲಾಗುವುದು ಎಂದು ಪ್ರಧಾನಿ ಘೋಷಿಸಿದ್ದರು.
ಸಿಖ್ ಸಮುದಾಯದವರು ಈ ದಿನವನ್ನು ‘ಸಾಹಿಬ್ಜಾದೆ ಶಹಾದತ್ ದಿವಸ್’ ಎಂದು ಆಚರಿಸುವಂತೆ ಕರೆ ನೀಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ದೆಹಲಿಯ ಮೇಜರ್ ಧ್ಯಾನ್ ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ವೀರ್ ಬಾಲ್ ದಿವಸ್ ಅನ್ನು ಗುರುತಿಸುವ ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
On Veer Baal Diwas, we recall the courage of the Sahibzades and Mata Gujri Ji. We also remember the courage of Sri Guru Gobind Singh Ji.
At 12:30 PM today, will be joining a programme to mark this inspiring day. https://t.co/Bgi5QRaW7N
— Narendra Modi (@narendramodi) December 26, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.