News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಉದ್ಯೋಗ ಪತ್ರ ಪಡೆದುಕೊಂಡ ರಾಜ್ಯದ 10 ಸಾವಿರ ಯುವ ಜನರು

ನವದೆಹಲಿ: ಮಾಜಿ ಪ್ರಧಾನಿ ವಾಜಪೇಯಿಯವರ ಜನ್ಮದಿನದ ಅಂಗವಾಗಿ ಉತ್ತಮ ಆಡಳಿತ ದಿನವನ್ನು ನಿನ್ನೆ ಆಚರಿಸಲಾಗಿತ್ತು. ಈ ಸಂದರ್ಭದಲ್ಲಿ ರಾಜ್ಯದ ಒಟ್ಟು 10 ಸಾವಿರ ಯುವಜನರಿಗೆ ಉದ್ಯೋಗಪತ್ರಗಳನ್ನು ವಿತರಿಸಲಾಯಿತು.

ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾಂಕೇತಿಕವಾಗಿ ಎಂಟು ಅಭ್ಯರ್ಥಿಗಳಿಗೆ ಉದ್ಯೋಗ ಪತ್ರಗಳನ್ನು ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಉದ್ಯೋಗ ಪಡೆದುಕೊಂಡ ಸುಮಾರು 3 ಸಾವಿರ ಅಭ್ಯರ್ಥಿಗಳು ಹಾಜರಿದ್ದರು.

ಉದ್ಯೋಗ ಪಡೆದುಕೊಂಡವರಲ್ಲಿ ಎಂಜಿನಿಯರಿಂಗ್, ಬಿ.ಎಸ್ಸಿ, ಬಿ.ಕಾಂ., ನರ್ಸಿಂಗ್‌, ಡಿಪ್ಲೊಮಾ, ಪಾಲಿಟೆಕ್ನಿಕ್‌ ಪದವೀಧರರು ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ಕೌಶಲ್ಯಾಭಿವೃದ್ಧಿ ಇಲಾಖೆಯ ಈ ಉಪಕ್ರಮದಡಿ, ಮಾಸಿಕ ಕನಿಷ್ಠ 18 ಸಾವಿರ ರೂ.ಗಳಿಂದ ಹಿಡಿದು ಗರಿಷ್ಠ 45 ಸಾವಿರ ರೂ. ವೇತನದವರೆಗಿನ ಉದ್ಯೋಗಗಳು ಲಭ್ಯವಾಗುವಂತೆ ನೋಡಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, “ಕರ್ನಾಟಕವನ್ನು ಬಿಟ್ಟರೆ ಬೇರೆ ಯಾವ ರಾಜ್ಯದಲ್ಲೂ ಉದ್ಯೋಗ ನೀತಿ ಇಲ್ಲ. ಇದಕ್ಕೆ ಪೂರಕವಾಗಿ ಸಂಶೋಧನೆ ಮತ್ತು ಅಭಿವೃದ್ಧಿ ನೀತಿಯನ್ನೂ ತರಲಾಗಿದೆ. ಸ್ಥಳೀಯರಿಗೆ ಉದ್ಯೋಗ ಸಿಗಬೇಕೆನ್ನುವುದು ಸರಕಾರದ ಗುರಿಯಾಗಿದ್ದು, ನೇಮಕಾತಿಗೆ ತಕ್ಕ ಪ್ರೋತ್ಸಾಹ ಕೊಡಲಾಗುತ್ತಿದೆ” ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top