News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸಾಲ ಹಗರಣ: ಚಂದಾ ಕೊಚ್ಚರ್‌ ಬಳಿಕ ವಿಡಿಯೋಕಾನ್‌ ಮುಖ್ಯಸ್ಥನ ಬಂಧನ

ನವದೆಹಲಿ: ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಮತ್ತು ಎಂಡಿ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚರ್ ಅವರನ್ನು ಬಂಧಿಸಿದ ಸುಮಾರು ಮೂರು ದಿನಗಳ ನಂತರ ಐಸಿಐಸಿಐ ಬ್ಯಾಂಕ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋಕಾನ್ ಸಮೂಹದ ಅಧ್ಯಕ್ಷ ವೇಣುಗೋಪಾಲ್ ಧೂತ್ ಅವರನ್ನು ಸಿಬಿಐ ಇಂದು ಬಂಧಿಸಿದೆ.

71 ವರ್ಷದ ಧೂತ್ ಅವರನ್ನು ಮುಂಬೈನಲ್ಲಿ ಬಂಧಿಸಲಾಗಿದೆ. ಮುಂಬೈನಲ್ಲಿನ ವಿಶೇಷ ಸಿಬಿಐ ನ್ಯಾಯಾಲಯದ ಮುಂದೆ ಸಿಬಿಐ ಅವರನ್ನು ಶೀಘ್ರದಲ್ಲೇ ಹಾಜರುಪಡಿಸಲಿದೆ. ಸಿಬಿಐ ಅವರನ್ನು ಆತನನ್ನು ಕಸ್ಟಡಿಯಲ್ ರಿಮಾಂಡ್‌ಗೆ‌ ಒಪ್ಪಿಸುವಂತೆ ಕೇಳಲಿದೆ.

2019 ರ ಭ್ರಷ್ಟಾಚಾರ ತಡೆ ಕಾಯಿದೆಯಡಿ ಕ್ರಿ ದಾಖಲಿಸಲಾದ ಎಫ್‌ಐಆರ್‌ನಲ್ಲಿ ಸಿಬಿಐ ಕೊಚ್ಚರ್ ದಂಪತಿ ಮತ್ತು ಧೂತ್ ಅವರ ಜೊತೆಗೆ ಸುಪ್ರೀಮ್ ಎನರ್ಜಿ, ವಿಡಿಯೋಕಾನ್ ಇಂಟರ್‌ನ್ಯಾಶನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ವಿಡಿಯೋಕಾನ್ ಇಂಡಸ್ಟ್ರೀಸ್ ಲಿಮಿಟೆಡ್ ನಿರ್ವಹಿಸುತ್ತಿರುವ ನುಪವರ್ ರಿನ್ಯೂವಬಲ್ಸ್ (ಎನ್‌ಆರ್‌ಎಲ್) ಕಂಪನಿಗಳನ್ನು ಆರೋಪಿಗಳೆಂದು ಹೆಸರಿಸಿದೆ.

ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ, ಆರ್‌ಬಿಐ ಮಾರ್ಗಸೂಚಿಗಳು ಮತ್ತು ಬ್ಯಾಂಕಿನ ಸಾಲ ನೀತಿಯನ್ನು ಉಲ್ಲಂಘಿಸಿ ಧೂತ್‌ ಅವರ ವಿಡಿಯೋಕಾನ್ ಗ್ರೂಪ್‌ನ ಕಂಪನಿಗಳಿಗೆ ಐಸಿಐಸಿಐ ಬ್ಯಾಂಕ್ 3,250 ಕೋಟಿ ರೂಪಾಯಿಗಳ ಸಾಲ ಸೌಲಭ್ಯಗಳನ್ನು ಮಂಜೂರು ಮಾಡಿದೆ ಎಂದು ಸಿಬಿಐ ಆರೋಪಿಸಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top